ಕಟಪಾಡಿ : ಏಣಗುಡ್ಡೆ ಶ್ರೀ ಬ್ರಹ್ಮ ಬೈದೇರುಗಳ ಗರಡಿ ಇಲ್ಲಿಯ ಮಾಯಂದಾಲ್ ಗುಡಿ, ಕಾಂತೇರಿ ಧೂಮಾವತಿ ಗುಡಿ, ಬೊಬ್ಬರ್ಯ ಗುಡಿ ಹಾಗೂ ಸಮುದಾಯ ಭವನಕ್ಕೆ ಶಿಲಾನ್ಯಾಸ ಕಾರ್ಯಕ್ರಮ
ಜನವರಿ 23, ಆದಿತ್ಯವಾರ ಪೂರ್ವಾಹ್ನ ಗಂಟೆ 11ಗಂಟೆಗೆ ಜರಗಲಿದೆ.
ಅಧ್ಯಕ್ಷತೆಯನ್ನು ಗರಡಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಅಶೋಕ್ ಎನ್ ಪೂಜಾರಿ ವಹಿಸಲಿದ್ದು,
ಅತಿಥಿಗಳಾಗಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್, ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಮೂಡಬೆಟ್ಟುವಿನ
ಆಡಳಿತ ಮೊಕ್ಕೇಸರರಾದ ಗೋವಿಂದಾಸ್ ಶೆಟ್ಟಿ, ಕಟಪಾಡಿ ಬೀಡು, ಗರಡಿ ಜೀರ್ಣೋದ್ಧಾರ ಸಮಿತಿ, ಮುಂಬೈ ಅಧ್ಯಕ್ಷರಾದ ಗೋಪಾಲ್ ಕಾಂಚನ್ ಭಾಗವಹಿಸಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.