ಕಾಪು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗ್ರಾಮ ಒನ್ ಯೋಜನೆಯು ಕುರ್ಕಾಲು ಗ್ರಾಮದ ವ್ಯಾಪ್ತಿಯಲ್ಲಿ ಬರುವ ಶಂಕರಪುರದಲ್ಲಿ ಉದ್ಘಾಟನೆಗೊಂಡಿತು.
ಕಾರ್ಯಕ್ರಮವನ್ನು ಕುರ್ಕಾಲು ಗ್ರಾಮ ಪಂಚಾಯತ್ ಅಧ್ಯಕ್ಷರು ಮಹೇಶ್ ಶೆಟ್ಟಿ ಉದ್ಘಾಟಿಸಿದರು. ಸಾಯಿ ಈಶ್ವರ್ ಗುರೂಜಿ ,ಧರ್ಮದರ್ಶಿಗಳು ಶ್ರೀ ದ್ವಾರಕಮಯಿ ಸಾಯಿಬಾಬಾ ಮಂದಿರ ಶಂಕರಪುರ ಇವರು ಅಧ್ಯಕ್ಷತೆ ವಹಿಸಿ ಆಶೀರ್ವದಿಸಿದರು.
750ಕ್ಕೂ ಹೆಚ್ಚಿನ ಸೇವೆಗಳನ್ನು ಒಳಗೊಂಡ ಇದು ಗ್ರಾಮ ಒನ್ ಕೇಂದ್ರವಾಗಿದ್ದು ಆಧಾರ್ , ಇ-ಸ್ಟ್ಯಾಂಪ್ ಹಾಗು ಸೇವಾ ಸಿಂಧುವಿನ ಎಲ್ಲ ಸೇವೆಗಳನ್ನು ಗ್ರಾಮೀಣ ಭಾಗದ ನಾಗರಿಕರಿಗೆ ಹಲವು ಸೇವೆಗಳನ್ನು ಒದಗಿಸುವ ಸೇವಾ ವೇದಿಕೆ ಇದಾಗಿರುತ್ತದೆ. ರಾಜೇಶ್ ನಾಯ್ಕ್ ಇದರ ವ್ಯವಸ್ಥಾಪಕರಾಗಿರುತ್ತಾರೆ.
ಮುಖ್ಯ ಅಥಿತಿಗಳಾಗಿ ಕುರ್ಕಾಲು ಗ್ರಾಮ ಪಂಚಾಯತ್ ಗ್ರಾಮ ಲೆಕ್ಕಾಧಿಕಾರಿ ಕ್ಲೆರೆನ್ಸ್ ಕಾರ್ನೆಲಿಯೋ, ಸಮಾಜ ಸೇವಕರು, ಉಡುಪಿ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತರು ಮತ್ತು ರಾಷ್ಟ್ರೀಯ ಪ್ರಶಸ್ತಿ ವಿಜೇತರಾದ ಮೊಹಮ್ಮದ್ ಫಾರೂಕ್ ಚಂದ್ರನಗರ, ಸಮಾಜ ಸೇವಕರು ,ರಾಷ್ಟ್ರೀಯ ಪ್ರಶಸ್ತಿ ವಿಜೇತರಾದ ದಿವಾಕರ್ ಬಿ ಶೆಟ್ಟಿ, ಸಮಾಜ ಸೇವಕರು ,ರಾಷ್ಟ್ರೀಯ ಪ್ರಶಸ್ತಿ ವಿಜೇತರಾದ ದಿವಾಕರ್ ಡಿ ಶೆಟ್ಟಿ, ಅಮರನಾಥ ಬಿ. ಶೆಟ್ಟಿ ,ಐರೋಳಿ ನವ ಮುಂಬೈ ,ರವಿರಾಜ್ ಸಾಲ್ಯಾನ್ ಮಲ್ಪೆ, ಹಿರಿಯ ವಿ.ಎಲ್. ಇ. ಉಡುಪಿ, ಆರ್. ಕೆ. ಮೆಂಡನ್ ಮಲ್ಪೆ ಮತ್ತು ವಿನೇಶ್ ನಾಯ್ಕ್, ಚೈತ್ರ , ನಿಶಾ ಉಪಸ್ಥಿತರಿದ್ದರು.