ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಬಾಡಿಗೆ ಮನೆ ತೆರವಲ್ಲಿ ಮಧ್ಯಸ್ಥಿಕೆ ವಹಿಸಿದ ಕಾರಣಕ್ಕೆ ವ್ಯಕ್ತಿಯೋರ್ವರಿಗೆ ತಂಡದಿಂದ ಹಲ್ಲೆ, ಕೊಲೆ ಯತ್ನ

Posted On: 02-02-2022 08:29PM

ಸುರತ್ಕಲ್ : ಇಲ್ಲಿನ ಠಾಣಾ ವ್ಯಾಪ್ತಿಯ ಕಾಟಿಪಳ್ಳ ಗ್ರಾಮದಲ್ಲಿ ಯುವಕರಿಬ್ಬರು ತಾವು ವಾಸವಿದ್ದ ಬಾಡಿಗೆ ಮನೆ ತೆರವಲ್ಲಿ ಮಧ್ಯಸ್ಥಿಕೆ ವಹಿಸಿದ್ದಾರೆ ಎಂಬ ಕಾರಣದಿಂದ ವ್ಯಕ್ತಿಯೋರ್ವರ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸುರತ್ಕಲ್ ಠಾಣೆಯಲ್ಲಿ ದಾಖಲಾಗಿದೆ.

ಮೊಹಮ್ಮದ್ ಅನಾಸ್ ರವರು ಫೆಬ್ರವರಿ 1ರಂದು ರಾತ್ರಿ 11-45ರ ಸುಮಾರಿಗೆ ತಮ್ಮ ಪರಿಚಯದ ಅಬೂಬಕರ್ ಮತ್ತು ಹ್ಯಾರಿಸ್ ರವರ ಬಳಿ ಅವರ ಮನೆಯ ಮುಂದೆ ನಿಂತು ಮಾತನಾಡುತ್ತಿರುವ ಸಮಯ ಆರೋಪಿಗಳಾದ ಚಾರು, ರವೂಫ್, ಅಕಿ, ಮುಸ್ತಫಾ @ ಅಪ್ಪು ಮತ್ತು ಇತರರೊಂದಿಗೆ ಸಮಾನ ಉದ್ದೇಶದಿಂದ ಮಾರಕಾಸ್ತ್ರಗಳೊಂದಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಕೊಲೆಗೆ ಯತ್ನಿಸಿದ್ದಾರೆ ಎಂದು ದೂರು ನೀಡಿದ್ದಾರೆ.

ಈ ಬಗ್ಗೆ ಸುರತ್ಕಲ್ ಪೋಲೀಸರು ಪ್ರಕರಣ ದಾಖಲಿಸಿದ್ದಾರೆ.