ಹಿಜಾಬ್- ಕೇಸರಿ ವಿವಾದದ ಹಿನ್ನೆಲೆ-ಕಾಪು ಪೇಟೆಯಲ್ಲಿ ಪೊಲೀಸ್ ಪಥಸಂಚಲನ
Posted On:
11-02-2022 01:28PM
ಕಾಪು : ಹಿಜಾಬ್- ಕೇಸರಿ ವಿವಾದದ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಕಾಪು ವೃತ್ತ ವ್ಯಾಪ್ತಿಯ ಪೊಲೀಸರು ಕಾಪು ಪೇಟೆಯಲ್ಲಿಂದು ಬೆಳಗ್ಗೆ ಪಥ ಸಂಚಲನ ನಡೆಸಿದರು.
ಕಾಪು ವೃತ್ತ ನಿರೀಕ್ಷಕ ಪ್ರಕಾಶ್ ನೇತೃತ್ವದಲ್ಲಿ ಕಾಪು, ಪಡುಬಿದ್ರೆ, ಶಿರ್ವ ಠಾಣಾ ವ್ಯಾಪ್ತಿಯ ಸುಮಾರು 90 ಪೊಲೀಸರು ಈ ಪಥ ಸಂಚಲನದಲ್ಲಿ ಭಾಗಿಯಾಗಿದ್ದರು.
ಪಡುಬಿದ್ರಿ ಎಸೈ ಅಶೋಕ್ ಕುಮಾರ್, ಶಿರ್ವ ಎಸೈ ಶ್ರೀಶೈಲಾ, ಕಾಪು ಎಸೈ ರಾಘವೇಂದ್ರ ಸಿ., ಕ್ರೈಂ ಎಸೈ ತಿಮ್ಮೇಶ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಡಿಆರ್ ತುಕಡಿ ಕೂಡಾ ಪಾಲ್ಗೊಂಡಿತ್ತು.