ಉಡುಪಿ : ಕಲ್ಯಾಣಪುರ ರೋಟರಿ ಕ್ಲಬ್ ವತಿಯಿಂದ ತನ್ನ ಸಾಮಾಜಿಕ ಸೇವಾ ಚಟುವಟಿಕೆಗಳಡಿ ಕೇಂದ್ರದ ಮಕ್ಕಳ ಉಪಯೋಗಕ್ಕಾಗಿ 25 ಆಸನಗಳನ್ನು ಕೊಡುಗೆಯಾಗಿ ನೀಡಲಾಯಿತು.
ಕೇಂದ್ರದ ಕಾರ್ಯಕರ್ತೆ ಭಾರತಿಯವರು ಸಲ್ಲಿಸಿದ ಈ ಬೇಡಿಕೆಗೆ ಅನುಗುಣವಾಗಿ ಸ್ಪಂದಿಸಿ ಸದಾನಂದ ನಾಯ್ಕ್ ಅವರು ಈ ದೇಣಿಗೆಗೆ ಪ್ರಾಯೋಜಕತ್ವ ನೀಡಿ ಸಹಕರಿಸಿದ್ದರು.
ಕ್ಲಬ್ ನ ಅಧ್ಯಕ್ಷ ಶಂಭುಶಂಕರ್, ರೋಟರಿ ವಲಯ ಸೇನಾನಿ ಬ್ರಯಾನ್ ಡಿಸೋಜ, ಗ್ರಾಮ ಪಂಚಾಯಿತಿ ಸದಸ್ಯರಾದ ಜಯಂತಿ ವಿ ಕೋಟ್ಯಾನ್, ಸ್ತ್ರೀ ಶಕ್ತಿ ಸ್ವಸಹಾಯ ಸಂಘದ ಸದಸ್ಯರು ಮತ್ತು ಮಕ್ಕಳ ಪೋಷಕರುಗಳ ಉಪಸ್ಥಿತಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಈ ಕೊಡುಗೆಯನ್ನು ಹಸ್ತಾಂತರಿಸಿ ಶುಭ ಹಾರೈಕೆಗಳನ್ನು ಸಲ್ಲಿಸಿದರು. ಮಮತಾ ಶೆಟ್ಟಿ ಉಪಸ್ಥಿತರಿದ್ದರು.