ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಭಾರತ ಸೇವಾ ರತ್ನ ಪ್ರಶಸ್ತಿ ಪುರಸ್ಕೃತರಾದ ಚಂದ್ರಶೇಖರ್ ಬಸ್ರೂರು

Posted On: 24-02-2022 04:37PM

ಉಡುಪಿ : ಸುದ್ದಿ ಕಿರಣ ಟಿವಿ ವಾಹಿನಿ ಹಾಗೂ ಕನ್ನಡ ಮತ್ತು ಸಂಸ್ಕ್ರತ ಇಲಾಖೆಯ ವತಿಯಿಂದ ಕೊಡ ಮಾಡಲ್ಪಡುವ ಭಾರತ ಸೇವಾ ರತ್ನ ಪ್ರಶಸ್ತಿಯನ್ನು ಚಂದ್ರಶೇಖರ ಬಸ್ರೂರು ಇವರಿಗೆ ನೀಡಿ ಗೌರವಿಸಲಾಯಿತು.

ಫೆಬ್ರವರಿ 20ರಂದು ರವೀಂದ್ರ ಕಲಾ ಕ್ಷೇತ್ರದ ನಯನ ಸಭಾಂಗಣ ಬೆಂಗಳೂರು ರಲ್ಲಿ ನಡೆದ ಸುದ್ದಿ ಕಿರಣ ಟಿ.ವಿ ವಾಹಿನಿ ಹಾಗೂ ಕನ್ನಡ ಮತ್ತು ಸಂಸ್ಕೃತ ಇಲಾಖೆಯ ವತಿಯಿಂದ ಭಾರತ ಸೇವಾ ರತ್ನ ಪ್ರಶಸ್ತಿ ೨೦೨೨ ನ್ನು ಚಂದ್ರಶೇಖರ ಬಸ್ರೂರು ಇವರಿಗೆ ನೀಡಿ ಗೌರವಿಸಲಾಯಿತು.

ರಂಗಭೂಮಿ ಕಲಾವಿದರಾಗಿ, ನಾಟಕ ರಚನೆ ಹಾಗೂ ನಿದೇ೯ಶಕರು, ಸಿನಿಮಾ ನಟ, ನಿದೇ೯ಶಕ,ವನಿಮಾ೯ಪಕರಾಗಿ, ಸಾವ೯ಜನಿಕ ಹೋರಾಟದಲ್ಲಿ ಮುಂಚೂಣಿಯಾಗಿ ಸೇವೆ ಸಲ್ಲಿಸಿರುತ್ತಾರೆ.