ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಮಾಚ್೯ 12ರಂದು ಕಾಪು ತಾಲೂಕಿನಲ್ಲಿ ಕಂದಾಯ ದಾಖಲೆ ಮನೆಬಾಗಿಲಿಗೆ ಯೋಜನೆಗೆ ಚಾಲನೆ

Posted On: 11-03-2022 09:11PM

ಕಾಪು : ರಾಜ್ಯ ಸರ್ಕಾರವು ಕಂದಾಯ ಇಲಾಖೆಯ ವತಿಯಿಂದ ಸಾರ್ವಜನಿಕರಿಗೆ ನೀಡುತ್ತಿರುವ ಮೂಲದಾಖಲೆಗಳಾದ ಪಹಣಿ, ಅಟ್ಲಾಸ್, ಆದಾಯ ಮತ್ತು ಜಾತಿಪತ್ರಗಳನ್ನು ರೈತರ ಮನೆ ಬಾಗಿಲಿಗೆ ಉಚಿತವಾಗಿ ತಲುಪಿಸುವ ನಿಟ್ಟಿನಲ್ಲಿ ಕಂದಾಯದಾಖಲೆ ಮನೆಬಾಗಿಲಿಗೆ ಯೋಜನೆಯನ್ನು ಮಾಚ್೯ 12 ರಂದು ರಾಜ್ಯಾದ್ಯಂತ ಅನುಷ್ಠಾನ ಗೊಳಿಸಲಾಗುತ್ತಿದೆ.

ಅದರಂತೆ ಕಾಪು ತಾಲೂಕು ಮಟ್ಟದಲ್ಲಿ ಕಾಪು ಹೋಬಳಿಯ ಉಳಿಯಾರಗೋಳಿ ಗ್ರಾಮದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್ ಇವರ ಅಧ್ಯಕ್ಷತೆಯಲ್ಲಿ ಮಾಚ್೯ 12ರಂದು ಪೂರ್ವಾಹ್ನ 11ಘಂಟೆಗೆ ಕಂದಾಯ ದಾಖಲೆ ಮನೆ ಬಾಗಿಲಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು.

ಅದೇ ದಿವಸ ಕಾಪು ತಾಲೂಕಿನ ಇತರೆ ಗ್ರಾಮಗಳಲ್ಲಿಯೂ ಸಹಾ ಗ್ರಾಮಕರಣಿಕರು ಹಾಗೂ ಗ್ರಾಮ ಸಹಾಯಕರು ಕಂದಾಯ ದಾಖಲೆಗಳನ್ನು ಮನೆಬಾಗಿಲಿಗೆ ವಿತರಿಸುವ ಕಾರ್ಯವನ್ನು ಮಾಡಲಿದ್ದಾರೆ ಎಂದು ಕಾಪು ತಹಶೀಲ್ದಾರರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.