ಕಾಪು : ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಮಟ್ಟಾರು ನೇತೃತ್ವದಲ್ಲಿ ದಶಮಾನೋತ್ಸವದ ಪ್ರಯುಕ್ತ ಬೃಹತ್ ಸ್ವಚ್ಛತಾ ಜನಜಾಗೃತಿ ಅಭಿಯಾನ ಕಾರ್ಯಕ್ರಮ ಜರಗಿತು.
ಶಿರ್ವ ಗ್ರಾಮ ಪಂಚಾಯತ್ ಸದಸ್ಯರಾದ ದೇವದಾಸ್ ನಾಯಕ್, ಆಶಾ ಆಚಾರ್ಯ, ಮಮತಾ ಶೆಟ್ಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ವಿಶ್ವ ಹಿಂದೂ ಪರಿಷದ್ ಕಾಪು ತಾಲೂಕು ಅಧ್ಯಕ್ಷರಾದ ಜಯಪ್ರಕಾಶ್ ಪ್ರಭು, ಮಟ್ಟಾರು ಘಟಕ ಅಧ್ಯಕ್ಷ ಪ್ರಕಾಶ್ ಶೆಟ್ಟಿ, ಉಪಾಧ್ಯಕ್ಷ ಜಗದೀಶ ಆಚಾರ್ಯ, ಸಂಚಾಲಕ ವಿಶ್ವನಾಥ ಆಚಾರ್ಯ, ಗ್ರಾಮ ಪಂಚಾಯತ್ ಸದಸ್ಯರಾದ ಸುರೇಶ್ ನಾಯಕ್, ರಾಜೇಶ್ ನಾಯ್ಕ್, ವಿಶ್ವ ಹಿಂದೂ ಪರಿಷದ್ ಬಜರಂಗದಳದ ಕಾರ್ಯಕರ್ತರು ಮತ್ತು ನಾಗರಿಕರು ಪಾಲ್ಗೊಂಡಿದ್ದರು. ಅಟ್ಟಿಂಜ ಸೇತುವೆಯಿಂದ ಮಟ್ಟಾರು ಯು.ಬಿ.ಎಂ.ಸಿ ಶಾಲೆಯ ವರೆಗೆ ಸ್ವಚ್ಛತೆ ಮಾಡಲಾಯಿತು.