ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕೊಂಕಣ್ ರೈಲ್ವೇಸ್ನಿಂದ ಜಿಲ್ಲಾ ಆರೋಗ್ಯ ಇಲಾಖೆಗೆ ವಾಹನ ಹಸ್ತಾಂತರ

Posted On: 30-03-2022 10:17PM

ಉಡುಪಿ : ಕೊಂಕಣ್ ರೈಲ್ವೇಸ್ ಮುಂಬೈ ಇವರ ವತಿಯಿಂದ ಸಿ.ಎಸ್.ಆರ್ (ಸಾಮಾಜಿಕ ಹೊಣೆಗಾರಿಕೆ ಕಾರ್ಯನೀತಿ) ಅನುದಾನದಡಿಯಲ್ಲಿ ಮಹೇಂದ್ರ ಬೊಲೇರೋ ವಾಹನವನ್ನು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮುಖಾಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಹೆಚ್ ಇವರಿಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಕೊಂಕಣ್ ರೈಲ್ವೇಸ್ ಅಧಿಕಾರಿಗಳಾದ ಸುಧಾ ಕೃಷ್ಣಮೂರ್ತಿ, ಬಿ.ಬಿ.ನಿಖಂ, ಆಶಾ ಶೆಟ್ಟಿ, ಡಾ. ಸ್ಟೀವೆನ್ ಜಾರ್ಜ್, ಜೈಸ್ವಾಲ್, ಬಿ.ಎಮ್ ವೆಂಕಟೇಶ್, ಆರೋಗ್ಯ ಇಲಾಖಾ ಅಧಿಕಾರಿಗಳಾದ ಡಾ ಪ್ರಶಾಂತ್ ಭಟ್, ಸುಬ್ರಮಣ್ಯ ಶೇರಿಗಾರ್ ಉಪಸ್ಥಿತರಿದ್ದರು.