ಕುಂದಾಪುರ ತಾಲೂಕು ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ; ಅಧ್ಯಕ್ಷರಾಗಿ ಕಿರಣ್ ಪೂಜಾರಿ ಆಯ್ಕೆ
Posted On:
07-04-2022 08:05PM
ಕುಂದಾಪುರ: ಇಲ್ಲಿನ ತಾಲೂಕು ಪತ್ರಕರ್ತರ ಸಂಘ (ರಿ) ಕುಂದಾಪುರ ಫೀಲೋಮಿನಾ ಕಮರ್ಷಿಯಲ್ ಪಾರ್ಕ್ ಕುಂದಾಪುರ ಸಂಘದ ಕಚೇರಿಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.
ಅಧ್ಯಕ್ಷರಾಗಿ ಕಿರಣ್ ಪೂಜಾರಿ, ಕಾರ್ಯದರ್ಶಿಯಾಗಿ ಸಂತೋಷ ಪಟೇಲ್, ಗೌರವಾಧ್ಯಕ್ಷರಾಗಿ ಎಸ್ ಸತೀಶ್ ಕುಮಾರ್ ಕೋಟೇಶ್ವರ ಹಾಗೂ ಪದಾಧಿಕಾರಿಗಳ ಆಯ್ಕೆ ಸಂಘದ ಸರ್ವ ಸದಸ್ಯರಿಂದ ಮಾಡಲಾಯಿತು.
ಕಾನೂನು ಸಲಹೆಗಾರರಾಗಿ ರವಿಕಿರಣ್ ಮುರ್ಡೇಶ್ವರ ಮತ್ತು ಸೋಮನಾಥ ಹೆಗ್ಡೆ ಮತ್ತು ಸಂಘದ ಗೌರವ ಸಲಹೆಗಾರರಾಗಿ ಕುಂದಾಪುರ ಮಿತ್ರ ಪತ್ರಿಕೆಯ ಸಂಪಾದಕರಾದ ಟಿ. ಪಿ. ಮಂಜುನಾಥ್, ಉಪಾಧ್ಯಕ್ಷರಾಗಿ ಪ್ರದೀಪ್ ಪಟೇಲ್, ದಯಾನಂದ್ ನಾಯಕ್ ಮತ್ತು ಎಸ್ ಕೃಷ್ಣ ಮರಕಾಲ ಬೀಜಾಡಿ ಆಯ್ಕೆಯಾದರು.
ಈ ಸಂದರ್ಭದಲ್ಲಿ ದಾಮೋದರ್ ಮೊಗವೀರ, ಪುರುಷೋತ್ತಮ್ ಪೂಜಾರಿ, ಜನಾರ್ಧನ್ ಕೆ. ಎಮ್ ಉಪಸ್ಥಿತರಿದ್ದರು.