ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು ಬಿಜೆಪಿ ಕಚೇರಿಯಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಜನ್ಮದಿನಾಚರಣೆ

Posted On: 14-04-2022 10:07PM

ಕಾಪು : ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಜನ್ಮದಿನ ಆಚರಿಸಲಾಯಿತು.

ಶಾಸಕರಾದ ಲಾಲಾಜಿ ಆರ್ ಮೆಂಡನ್, ರಾಜ್ಯ ಕಾರ್ಯಕಾರಿಣಿ‌ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾ ರೈತ ಮೋರ್ಚ ಅಧ್ಯಕ್ಷರಾದ ಪ್ರವೀಣ್ ಗುರ್ಮೆ, ಮಂಡಲ ಉಪಾಧ್ಯಕ್ಷರಾದ ನವೀನ್ ಎಸ್ ಕೆ, ಮಂಡಲ ರೈತಮೋರ್ಚ ಅಧ್ಯಕ್ಷರಾದ ಗುರುನಂದನ್, ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ, ಮಂಡಲ ಕಾರ್ಯದರ್ಶಿ ಮಾಲಿನಿ ಶೆಟ್ಟಿ, ಕಾಪು ಕ್ಷೇತ್ರದ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಕಾರ್ಯಕರ್ತರು, ಪದಾಧಿಕಾರಿಗಳು ಉಪಸ್ಥಿತರಿದ್ದರು.