ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಉಳಿಯಾರು : ಉಳಿಯಾರಮ್ಮನ ಸನ್ನಿಧಿಯಲ್ಲಿ ಪ್ರತಿಷ್ಠೆಯ ವರ್ಧಂತಿ ಮಹೋತ್ಸವದ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮ

Posted On: 01-05-2022 11:48PM

ಕಾಪು : ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಉಳಿಯಾರು ಮಜೂರು ಉಳಿಯಾರಮ್ಮನ ಸನ್ನಿಧಿಯಲ್ಲಿ ಭಕ್ತಾಧಿಗಳ ಸಹಕಾರದೊಂದಿಗೆ ಮೇ 3, ಮಂಗಳವಾರ ಅಕ್ಷಯ ತೃತಿಯ ದಿನದಂದು ಪ್ರತಿಷ್ಠೆಯ ವರ್ಧಂತಿ ಮಹೋತ್ಸವದ ಪ್ರಯುಕ್ತ ದುರ್ಗೆಯ ಸನ್ನಿಧಿಯಲ್ಲಿ ಬೆಳಿಗ್ಗೆ 7 ಗಂಟೆಗೆ ಶತ ಚಂಡಿಕಯಾಗ, ಮಧ್ಯಾಹ್ನ 12ಕ್ಕೆ ಪೂರ್ಣಹುತಿ, ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ.

ಸಂಜೆ ೬ ಗಂಟೆಗೆ ರಂಗಪೂಜೆ ಬಲಿ ಉತ್ಸವ, ರಾತ್ರಿ ಶ್ರೀ ಪಂಚಾಕ್ಷರೀ ಮಕ್ಕಳ ಮೇಳ ಎಲ್ಲೂರು ಇವರಿಂದ ಮಹಿಷ ಮರ್ಧಿನಿ ಯಕ್ಷಗಾನ ನಡೆಯಲಿದೆ.

ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಂಡು ಅನ್ನ ಪ್ರಸಾದ ಸ್ವೀಕರಿಸಿ ದೇವಿಯ ಕೃಪೆಗೆ ಪಾತ್ರರಾಗಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.