ಕಾಂಗ್ರೆಸ್ಗೆ ಗುಡ್ ಬೈ ಹೇಳಿದ ಪ್ರಮೋದ್ ಮಧ್ವರಾಜ್
Posted On:
07-05-2022 04:38PM
ಉಡುಪಿ : ಕರಾವಳಿ ರಾಜಕೀಯದಲ್ಲಿ ಬಹಳ ದಿನಗಳಿಂದ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ತೊರೆಯಲಿದ್ದಾರೆ ಎಂಬ ಮಾತು ಇಂದು ಸತ್ಯವಾಗಿದೆ.
ಕಾಂಗ್ರೆಸ್ ಸರಕಾರದ ಸಂದರ್ಭ ಮೀನುಗಾರಿಕೆ, ಕ್ರೀಡಾ ಸಚಿವರಾಗಿ, ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಜನಪರ ಕಾರ್ಯ ಮಾಡಿದ್ದರು.
ಇದೀಗ ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ತಮ್ಮ ರಾಜೀನಾಮೆಯನ್ನು ಪಕ್ಷದ ಅಧ್ಯಕ್ಷರಿಗೆ ರವಾನಿಸಿದ್ದಾರೆ.
ಯಾವ ರಾಜಕೀಯ ಪಕ್ಷಕ್ಕೆ ಸೇರಲಿದ್ದಾರೆ? ಅಥವಾ ರಾಜಕೀಯದಿಂದ ದೂರವಿದ್ದು ಜನಪರ ಕಾರ್ಯದಲ್ಲಿ ತೊಡಗಲಿದ್ದಾರೆಯೇ ಎಂಬುದು ಸದ್ಯದ ಕುತೂಹಲವಾಗಿದೆ.