ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಜಾನಪದ ಸಂಶೋಧಕ ಕೆ.ಎಲ್.ಕುಂಡಂತಾಯರಿಗೆ ಸನ್ಮಾನ

Posted On: 09-05-2022 11:12PM

ಸುರತ್ಕಲ್ : ಉಭಯ ಜಿಲ್ಲೆಗಳ ಲ್ಲೆಗಳ ನೂರಕ್ಕೂ ಹೆಚ್ಚು ದೇವಾಲಯಗಳ ಕುರಿತು ಅಧ್ಯಯನ ನಡೆಸಿ ಸಂಶೋಧನಾತ್ಮಕ ಲೇಖನಗಳನ್ನು ಬರೆದ,ಜಾನಪದ ಸಂಶೋಧಕ, ನಾಗಾರಾಧನೆ, ಬೂತಾರಾಧನೆ ಸಹಿತ ಜನಪದರ ಆಚರಣೆಗಳ ಕುರಿತು ಬರೆದ ಕೆ.ಎಲ್.ಕುಂಡಂತಾಯ ಅವರನ್ನು ಸುರತ್ಕಲ್ ಶಾಸಕ ಡಾ.ವೈ ಭರತ ಶೆಟ್ಟಿ, ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು, ಯಕ್ಷಗಾನ ಕಲಾವಿದ ಕೆ.ಗೋವಿಂದ ಭಟ್, ದೇವಳದ ಆನುವಂಶಿಕ ಮೊಕ್ತಸರ ಡಾ. ಮಯ್ಯ ಮುಂತಾದವರ ಉಪಸ್ಥಿತಿಯಲ್ಲಿ ಸುರತ್ಕಲ್ ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನದಲ್ಲಿ ಸನ್ಮಾನಿಸಲಾಯಿತು.