ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಮಾಸ್ಟರ್ ಪ್ರಥಮ್ ಕಾಮತ್ ಕಟಪಾಡಿ ಇವರಿಗೆ ಸಂಗಮ ರತ್ನ ರಾಷ್ಟ್ರೀಯ ಪ್ರಶಸ್ತಿ

Posted On: 16-05-2022 09:59PM

ಕಟಪಾಡಿ : ಡಾ| ಶಿವಕುಮಾರ ಸ್ವಾಮೀಜಿಯವರ ಜಯಂತಿ ಅಂಗವಾಗಿ ಸಂಗಮ ಸಮಾವೇಶ ಸಮಾರಂಭ ಮತ್ತು ಜನಸ್ಪಂದನ ಪತ್ರಿಕೆಯ 13ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ನೀಡಲಿರುವ ಸಂಗಮ ರತ್ನ ರಾಷ್ಟ್ರೀಯ ಪ್ರಶಸ್ತಿಗಾಗಿ ಬಹುಮುಖ ಪ್ರತಿಭೆ ಮಾ.ಪ್ರಥಮ್ ಕಾಮತ್ ಕಟಪಾಡಿ ಇವರು ಆಯ್ಕೆಯಾಗಿರುತ್ತಾರೆ.

ಮೇ 22 ರ ಬೆಂಗಳೂರಿನ ಜೆ. ಪಿ ರಸ್ತೆಯ ಕನ್ನಡ ಭವನದ ನಯನ ಸಭಾಂಗಣದಲ್ಲಿ ಗಣ್ಯರ ಸಮ್ಮುಖದಲ್ಲಿ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

ಇದೇ ಸಂದರ್ಭದಲ್ಲಿ ಪ್ರಥಮ್ ಕಾಮತ್ ಕಟಪಾಡಿ ಇವರಿಂದ 75 ನೇ ಜಾದೂ ಪ್ರದರ್ಶನ ಕೂಡ ನಡೆಯಲಿದೆ.