ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು : ಮುಂಬೈ ಪೊಲೀಸ್ ಉಪ ಮಹಾನಿರೀಕ್ಷಕ ವೀರೇಶ್ ಪ್ರಭುರವರಿಂದ ಶಿಲಾ ಸೇವೆ, ಶಿಲಾ ಪುಷ್ಪ ಸಮರ್ಪಣೆ

Posted On: 17-05-2022 04:44PM

ಕಾಪು : ಪೊಲೀಸ್ ಉಪ ಮಹಾನಿರೀಕ್ಷಕ, ಡಿಐಜಿ ಮುಂಬೈ ಕ್ರೈಮ್ ವೀರೇಶ್ ಪ್ರಭು, ಬೈಕಲ, ಮುಂಬೈ ಇವರು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ 9 ಶಿಲಾ ಸೇವೆ ನೀಡಿ, ಶಿಲಾ ಪುಷ್ಪ ಸಮರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ರಮೇಶ್ ಹೆಗ್ಡೆ ಕಲ್ಯಾ, ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷರಾದ ಮನೋಹರ ಶೆಟ್ಟಿ ಮತ್ತು ಆರ್ಥಿಕ ಸಮಿತಿಯ ಪ್ರಧಾನ ಸಂಚಾಲಕರಾದ ಉದಯ ಸುಂದರ ಶೆಟ್ಟಿ ಉಪಸ್ಥಿತರಿದ್ದರು.