ಕಾಪು : ಕರ್ನಾಟಕ ಸರಕಾರದ ಅಧೀನದಲ್ಲಿರುವ ಕಾಪು ಸಾರ್ವಜನಿಕ ಗ್ರಂಥಾಲಯ ಮತ್ತು ಉಡುಪಿ ಮಲಬಾರ್ ಗೋಲ್ಡ್ & ಡೈಮಂಡ್ಸ್ ಇದರ ಸಾರ್ವಜನಿಕ ಗ್ರಂಥಾಲಯಕ್ಕೆ ಸಮಾಜ ಸೇವೆಯಲ್ಲಿ ರಾಷ್ಟ್ರೀಯ ಪುರಸ್ಕೃತರಾದ ಮೊಹಮ್ಮದ್ ಫಾರೂಕ್ ಚಂದ್ರನಗರ, ದಿವಾಕರ ಬಿ ಶೆಟ್ಟಿ ಕಳತ್ತೂರು,ದಿವಾಕರ ಡಿ ಶೆಟ್ಟಿ ಕಳತ್ತೂರು ಇವರ ನೇತೃತ್ವದಲ್ಲಿ ಕಾದಂಬರಿ ಕಥೆ ಪುಸ್ತಕ, ಆರೋಗ್ಯಕ್ಕೆ ಸಂಬಂಧಪಟ್ಟ ಪುಸ್ತಕ ಹಾಗೂ ಧಾರ್ಮಿಕ ವಿಚಾರವಾದ ದೆಂದೂರ ಪಂಜುರ್ಲಿ ಪುಸ್ತಕವನ್ನು ಕಾಪುವಿನ ಸಾರ್ವಜನಿಕ ಗ್ರಂಥಾಲಯದ ಮೇಲ್ವಿಚಾರಕರಾದ ಪೂರ್ಣಿಮಾ ಇವರಿಗೆ ಹಸ್ತಾಂತರಿಸಲಾಯಿತು.
ಈ ಸಂದರ್ಭ ಸಮಾಜ ಸೇವಾ ವೇದಿಕೆ ಗೌರವ ಸಲಹೆಗಾರರದ ದಯಾನಂದ ಕೆ ಶೆಟ್ಟಿ ದೆಂದೂರು, ಉಡುಪಿ ಯುವ ದೇವಾಡಿಗರ ವೇದಿಕೆ ಅಧ್ಯಕ್ಷ ಅಶೋಕ್ ಶೇರಿಗಾರ್ ಅಲೆವೂರು, ಉಡುಪಿ ಮಲಬಾರ್ ಗೋಲ್ಡ್ & ಡೈಮಂಡ್ಸ್ ಮುಖ್ಯಸ್ಥರಾದ ಹಫೀಜ್ ರೆಹಮಾನ್, ಮಾರ್ಕೆಟಿಂಗ್ ಮೆನೇಜರ್ ರಾಘವೇಂದ್ರ ನಾಯಕ್ ಅಜೆಕಾರ್, ಮಲಬಾರ್ ಚಾರಿಟಿ ಇಂಚಾರ್ಜ್ ತನ್ಜಿಮ್ ಶಿರ್ವ ಉಪಸ್ಥಿತರಿದ್ದರು.