ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಹೇರೂರು : ಆಮಂತ್ರಣ ಪತ್ರಿಕೆ ಬಿಡುಗಡೆ

Posted On: 22-05-2022 10:05AM

ಕಾಪು : ಹೇರೂರು ಗ್ರಾಮದ ಶ್ರೀ ಜುಮಾದಿ ಮತ್ತು ಬಂಟ ದೈವಸ್ಥಾನದ ಪುನರ್ ಪ್ರತಿಷ್ಠೆ ಸಾನಿಧ್ಯ ಕಲಶಾಭಿಷೇಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಇಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹೇರೂರು ಇದರ ಪ್ರಧಾನ ಅರ್ಚಕರಾದ ಗುರುರಾಜ್ ಭಟ್ ರವರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರು ಹಾಗೂ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರಾದ ರಾಮನಾಥ ಶೆಟ್ಟಿ ಹೇರೂರು, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಗುಣಪಾಲ ಶೆಟ್ಟಿ ಅಬ್ಬೆಟ್ಟು, ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷರಾದ ದೇವದಾಸ್ ಜೋಗಿ, ಶಂಕರ್ ದೇವಾಡಿಗ ಹೇರೂರು, ಗಾಣದ ಮನೆ ದೇಜು ಸೇರಿಗಾರ್, ನಿವೃತ್ತ ಸೇನಾನಿ ದಿನಕರ ರಾವ್, ಮುಕ್ಕಾಲ್ದಿ ಹರೀಶ್ ಶೆಟ್ಟಿ, ವಿಜಯ ಶೆಟ್ಟಿ, ಪ್ರಕಾಶ್ ಶೆಟ್ಟಿ, ಯತೀಶ್ ಶೆಟ್ಟಿ ಹಾಗೂ ಹೇರೂರು ಗ್ರಾಮಸ್ಥರು ಉಪಸ್ಥಿತರಿದ್ದರು.