ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಪ್ರದೀಪಚಂದ್ರ ಕುತ್ಪಾಡಿಯವರಿಗೆ ಜಾನಪದ ಪ್ರಶಸ್ತಿ

Posted On: 18-06-2022 11:14PM

ಉಡುಪಿ : ಕರ್ನಾಟಕ ಜಾನಪದ ಪರಿಷತ್ತು (ರಿ) ಬೆಂಗಳೂರು- ಉಡುಪಿ ಜಿಲ್ಲಾ ಘಟಕ ಇವರು ಆಯೋಜಿಸಿದ್ದ ಜಾನಪದ ಉತ್ಸವ 2022 ರಲ್ಲಿ ಈ ಬಾರಿ ಪ್ರದೀಪಚಂದ್ರ ಕುತ್ಪಾಡಿ ,ರಂಗಕರ್ಮಿ ಮತ್ತು ಸಂಘಟಕರು ಉಡುಪಿ ಇವರಿಗೆ ಜಾನಪದ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂದರ್ಭ ರಾಜಕೀಯ,ಸಾಂಸ್ಕೃತಿಕ ಕ್ಷೇತ್ರದ ಗಣ್ಯರು, ಕರ್ನಾಟಕ ಜಾನಪದ ಪರಿಷತ್ತಿನ ಪದಾಧಿಕಾರಿಗಳು, ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು.