ಕಾಪು : ಇತ್ತೀಚೆಗೆ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣರಿಗೆ ಸಾಮಾಜಿಕ ಜಾಲತಾಣದಲ್ಲಿ ಜೀವಬೆದರಿಕೆ ಒಡ್ಡಿದ ಆರೋಪಿಯನ್ನು ಬಂಧಿಸುವಂತೆ ಬಿಜೆಪಿ ಯುವಮೋರ್ಚಾ ಕಾಪು ಮಂಡಲದಿಂದ ಕಾಪು ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿತ್ತು.
ಅದರಂತೆ ಈ ದೂರನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರವಾಗಿ ಆರೋಪಿಯನ್ನು ಬಂಧಿಸಿ ತಮ್ಮ ಕರ್ತವ್ಯ ಪ್ರಜ್ಞೆಯನ್ನು ತೋರ್ಪಡಿಸಿದ ಕಾಪು ವ್ರತ್ತ ನಿರೀಕ್ಷಕರು ಹಾಗೂ ಠಾಣಾಧಿಕಾರಿಗಳಿಗೆ ಇಂದು ಬಿಜೆಪಿ ಯುವಮೋರ್ಚಾ ಕಾಪು ಮಂಡಲದಿಂದ ಅಭಿನಂದನೆ ಸಲ್ಲಿಸಲಾಯಿತು.