ಕಾಪು : ಇಲ್ಲಿನ ಕುಲಾಲ ಸಂಘದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಇತ್ತೀಚಿಗೆ ಸಂಘದ ಕಚೇರಿಯಲ್ಲಿ ಜರಗಿತು. ಸಂಘದ ಮುಂದಿನ ಕಾರ್ಯ ಅವಧಿಗೆ ಸಂದೀಪ್ ಬಂಗೇರ ಶಂಕರಪುರ ಅಧ್ಯಕ್ಷರಾಗಿ ಮರು ಆಯ್ಕೆಗೊಂಡರು. ಪ್ರಧಾನ ಕಾರ್ಯದರ್ಶಿಯಾಗಿ ಯಶವಂತ ಮೂಲ್ಯ ಎಲ್ಲೂರು ಆಯ್ಕೆಯಾಗಿದ್ದಾರೆ.
ಈ ಹಿಂದೆ ಇದ್ದ ಕಾರ್ಯಕಾರಿಣಿ ಸಮಿತಿಯನ್ನು ಮುಂದುವರೆಸುವುದೆಂದು ಸಭೆಯಲ್ಲಿ ನಿರ್ಧರಿಸಲಾಯಿತು ಎಂದು ಕಾಪು ಕುಲಾಲ ಸಂಘ ಪ್ರಕಟನೆಯಲ್ಲಿ ತಿಳಿಸಿದೆ.