ಉದ್ಯಾವರ : ಹೃದಯಾಘಾತದಿಂದ ಮಹಿಳೆ ಸಾವು
Posted On:
30-06-2022 07:59PM
ಉದ್ಯಾವರ : ಇಲ್ಲಿನ ಗುಡ್ಡೆಅಂಗಡಿ ಉದ್ಯಾವರದ ವಸಂತಿ (55) ರವರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಜೂನ್ 30 ರಂದು ನಡೆದಿದೆ.
ಕಂಟ್ಟಿಂಗೇರಿಯಲ್ಲಿರುವ ಬ್ಯಾಂಕ್ ಒಂದರಲ್ಲಿ ಉದ್ಯೋಗ ಮಾಡಿಕೊಂಡಿರುವ ಇವರು ಬೆಳಿಗ್ಗೆ 8:30 ಗಂಟೆಗೆ ಬ್ಯಾಂಕ್ಗೆ ಹೋಗಲು ಉದ್ಯಾವರದ ಗುಡ್ಡೆಯಂಗಡಿ ಬಸ್ ನಿಲ್ದಾಣದಲ್ಲಿ ಬಸ್ ಗೆ ಕಾಯುತ್ತಿದ್ದಾಗ ಕುಸಿದು ಬಿದ್ದವರನ್ನು ಸ್ಥಳೀಯ ರಿಕ್ಷಾದವರು ಒಂದು ರಿಕ್ಷಾದಲ್ಲಿ ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ.
ವಸಂತಿರವರಿಗೆ ಮಧುಮೇಹದ ಖಾಯಿಲೆ ಇದ್ದು ಒಂದೂವರೆ ವರ್ಷದ ಮೊದಲು ಎದೆ ಬಡಿತದ ಸಮಸ್ಯೆ ಕಾಣಿಸಿಕೊಂಡಿದ್ದು ಈ ಬಗ್ಗೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ವಸಂತಿಯವರು ಹೃದಯಘಾತದಿಂದ ಮೃತಪಟ್ಟಿರುವ ಸಾಧ್ಯತೆ ಇರುತ್ತದೆ. ಅವರ ಮರಣದಲ್ಲಿ ಬೇರೆ ಯಾವುದೇ ಸಂಶಯ ಇರುವುದಿಲ್ಲ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.