ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಶಂಕರಪುರ : ಕೆಸರು ಗದ್ದೆ ಗ್ರಾಮೀಣ ಕ್ರೀಡಾಕೂಟ - ಕಂಡಡೊಂಜಿ ದಿನ

Posted On: 10-07-2022 10:05PM

ಕಾಪು : ಜೆಸಿಐ ಶಂಕರಪುರ ಜಾಸ್ಮಿನ್, ಬಿಲ್ಲವ ಸಂಘ ಇನ್ನಂಜೆ, ಯುವತಿ ಮಂಡಲ (ರಿ.) ಇನ್ನಂಜೆ, ಯುವಕ ಮಂಡಲ (ರಿ.) ಇನ್ನಂಜೆ, ಇಂಡಿಯನ್ ಸೀನಿಯರ್ ಜೆಸಿಐ ಉಡುಪಿ ಟೆಂಪಲ್ ಸಿಟಿ ರಿಜನ್, ರೋಟರಿ ಸಮುದಾಯ ದಳ ಇನ್ನಂಜೆ, ಸೈಂಟ್ ಜೋನ್ಸ್ ಶಾಲೆಗಳ ಹಳೆ ವಿದ್ಯಾರ್ಥಿ ಸಂಘ ಶಂಕರಪುರ, ರಿಕ್ಷಾ ಚಾಲಕರ ಮತ್ತು ಮಾಲಕರ ಸಂಘ ಶಂಕರಪುರ, ಟೆಂಪೋ ಚಾಲಕರ ಮತ್ತು ಮಾಲಕರ ಸಂಘ ಶಂಕರಪುರ ಇವರ ಸಂಯುಕ್ತ ಆಶ್ರಯದಲ್ಲಿ ಕೆಸರು ಗದ್ದೆ ಗ್ರಾಮೀಣ ಕ್ರೀಡಾಕೂಟ ಕಂಡಡೊಂಜಿ ದಿನವು ಶಂಕರಪುರ ಮಾರ್ಕೆಟ್ ರೋಡ್ ತೆಂಡೆಮನೆ ಕೆಸರುಗದ್ದೆಯಲ್ಲಿ ಜರಗಿತು.

ಕಾರ್ಯಕ್ರಮದಲ್ಲಿ ಯಸ್‌.ವಿ.ಎಚ್ ಕನ್ನಡ ಮಾಧ್ಯಮ ಪ್ರೌಢಶಾಲೆ ಇನ್ನಂಜೆಯ 85 %ಕ್ಕಿಂತ ಹೆಚ್ಚಿನ ಅಂಕ ಗಳಿಸಿದ ಎಸ್.ಎಸ್.ಎಲ್.ಸಿಯ 10 ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

ಸಾರ್ವಜನಿಕರಿಗೆ ವಿವಿಧ ಆಟೋಟಗಳನ್ನು ಏರ್ಪಡಿಸಲಾಗಿತ್ತು.

ಈ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ರೋಶನ್ ಕುಮಾರ್ ಶೆಟ್ಟಿ , ಮುಖ್ಯ ಅತಿಥಿಗಳಾಗಿ ದಿನೇಶ್ ಶೆಟ್ಟಿ ಕಲ್ಯಾ, ಇನ್ನಂಜೆ ಯುವಕ ಮಂಡಲದ ಅಧ್ಯಕ್ಷರಾದ ಉಮೇಶ್ ಆಚಾರ್ಯ, ಇನ್ನಂಜೆ ಯುವತಿ ಮಂಡಲದ ಅಧ್ಯಕ್ಷರಾದ ಆಶಾ ನಾಯಕ್, ಕಾರ್ಯದರ್ಶಿ ಲಕ್ಷ್ಮಿ.ವೈ. ನಾಯಕ್ , ಸ್ಥಾಪಕ ಅಧ್ಯಕ್ಷರಾದ ಸುಮಲತಾ, ಇತರೆ ಸಂಘ ಸಂಸ್ಥೆಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು, ಸದಸ್ಯರು, ಸ್ಥಳೀಯರು ಉಪಸ್ಥಿತರಿದ್ದರು.