ಕಾರ್ಕಳ : ತಾಲೂಕು ಬೋಳ ಗ್ರಾಮದ ಬೋಳ ಕೋಡಿಯಲ್ಲಿರುವ ಶ್ರೀ ಮೃತ್ಯುಂಜಯ ರುದ್ರ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮೂರ್ತಿ, ನಗದು, ಡಿವಿಆರ್ ನ್ನು ಕಳವುಗೈದ ಪ್ರಕರಣ ನಡೆದಿದೆ.
ಕಳ್ಳರು ಕಾರ್ಕಳ ತಾಲೂಕು ಬೋಳ ಗ್ರಾಮದ ಬೋಳ ಕೋಡಿಯಲ್ಲಿರುವ ಶ್ರೀ ಮೃತ್ಯುಂಜಯ ರುದ್ರ ಸೋಮನಾಥೇಶ್ವರ ದೇವಸ್ಥಾನದ ಉತ್ತರ ದಿಕ್ಕಿನ ಮರದ ಮತ್ತು ಕಬ್ಬಿಣದ ಬಾಗಿಲುಗಳಿಗೆ ಹಾಕಿದ ಬೀಗಗಳನ್ನು ಯಾವುದೋ ಸಲಕರಣೆಯಿಂದ ಮುರಿದು ಒಳ ಪ್ರವೇಶಿಸಿ, ದೇವಸ್ಥಾನದ ಗರ್ಭಗುಡಿಯ ಬಾಗಿಲಗೆ ಹಾಕಿದ ಬೀಗವನ್ನು ಯಾವುದೇ ಸಲಕರಣೆಯಿಂದ ಮುರಿದು ದೇವರ ಪೀಠದಲ್ಲಿ ಇರಿಸಿದ್ದ ಪುರಾತನ ಪಂಚಲೋಹದ ಬಲಿ ಮೂರ್ತಿ, ಗಣಪತಿ ಗುಡಿಯ ಬಾಗಿಲಿಗೆ ಹಾಕಿದ ಬೀಗವನ್ನು ಮುರಿದು ಅದರೊಳಗೆ ಇರಿಸಿದ್ದ ಸುಮಾರು 5,000/- ರೂಪಾಯಿ ಮೌಲ್ಯದ ಗಣಪತಿಯ ಬೆಳ್ಳಿಯ ಮುಖವಾಡ, ತೀರ್ಥ ಮಂಟಪದ ಬಳಿ ಇರಿಸಿದ್ದ ಕಬ್ಬಿಣದ ಕಾಣಿಕೆ ಡಬ್ಬಿಯ ಬಾಗಿಲನ್ನು ಯಾವುದೋ ಸಲಕರಣೆಯಿಂದ ಮೀಟಿ ತೆರೆದು, ಅದರೊಳಗೆ ಇದ್ದ ನಗದು ಅಂದಾಜು 45,000-50,000 ರೂಪಾಯಿಗಳನ್ನು (ನೋಟುಗಳು ಮಾತ್ರ) ಹಾಗೂ ದೇವಸ್ಥಾನ ಕಛೇರಿಯ ಒಳಗೆ ಅಳವಡಿಸಿದ್ದ ಸುಮಾರು 9000/- ರೂಪಾಯಿ ಮೌಲ್ಯದ HIK VISION ಕಂಪೆನಿಯ DVR ನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ.
ಈ ಬಗ್ಗೆ ಶ್ರೀನಿವಾಸ ಭಟ್ ನೀಡಿದ ದೂರಿನಂತೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.