ಮಂಗಳೂರು : ತುಳು ಭಾಷೆಯನ್ನು ಸಂವಿಧಾನದ ಕಲಂ 347ರ ಪ್ರಕಾರ ರಾಜ್ಯದ ಅಧಿಕೃತ ಭಾಷೆಯನ್ನಾಗಿ ಮಾನ್ಯ ಮಾಡಲು, ಜನಪ್ರತಿನಿಧಿಗಳು ಹೇಳುತ್ತಿರುವ ತಾಂಂತ್ರಿಕ ಕಾರಣವನ್ನು ನಿವಾರಿಸುವಂತೆ ಜೈ ತುಳುನಾಡ್ ಸಂಘಟನೆಗಳು ಕಾರ್ಯಕರ್ತರು ಮಂಗಳವಾರ ಶ್ರೀಕ್ಷೇತ್ರದ ಧರ್ಮಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಿದರು.
ನಂತರ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದ ಡಾ: ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಅಭಿನಂದನೆಯನ್ನು ಸಲ್ಲಿಸಿ, ತುಳುಮಾತೆಯ ಛಾಯಾಚಿತ್ರವನ್ನು ನೀಡಿ ಗೌರವಿಸಲಾಯಿತು.
ಹೆಗ್ಗಡೆ ಅವರು ತುಳುವನ್ನು ಅಧಿಕೃತ ಭಾಷೆಯನ್ನಾಗಿಸಲು ಖಂಡಿತ ಪ್ರಯತ್ನ ಪಡುವುದಾಗಿ ತಿಳಿಸಿದರು. ರಾಜ್ಯಸಭಾ ಸದಸ್ಯನಾಗಿ ನನಗೆ ತುಳು ಭಾಷೆಯ ಬಗ್ಗೆ ಸಂಸತ್ತಿನಲ್ಲಿ ಮಾತನಾಡಲು ಒಂದು ಒಳ್ಳೆಯ ಅವಕಾಶವನ್ನು ಒದಗಿ ಬಂದಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯ ಡಾ.ಆಕಾಶ್ ರಾಜ್ ಜೈನ್, ಜೈ ತುಳುನಾಡ್ ಸಂಘಟನೆ ಅಧ್ಯಕ್ಷ ಅಶ್ವಥ್ ತುಳುವೆ, ಸ್ಥಾಪಕ ಸದಸ್ಯ ಕಿರಣ್ ತುಳುವೆ, ತುಲು ಸಾಹಿತ್ಯ - ಸಂಸ್ಕೃತಿ ಸಮಿತಿಯ ಕುಶಾಲಾಕ್ಷೀ ವಿ.ಕಣ್ವತೀರ್ಥ, ಉಪಸಂಘಟನಾ ಕಾರ್ಯದರ್ಶಿ ಪೃಥ್ವಿ ತುಳುವೆ, ಪ್ರಚಾರ ಸಮಿತಿಯ ವಿನಯ್ ರೈ ಕುಡ್ಲ, ತುಳುನಾಡು ಒಕ್ಕೂಟದ ಸಂಸ್ಥಾಪಕ ಶೈಲೇಶ್ ಆರ್.ಜೆ., ಚಾವಡಿ ಕೂಟದ ಅಧ್ಯಕ್ಷ ಶೇಖರ್ ಗೌಡತ್ತಿಗೆ, ಬೊಲ್ತೇರ್ ತಾಲೂಕು ಕೂಟದ ಅಧ್ಯಕ್ಷ ರಾಜೇಶ್ ಕುಲಾಲ್, ತುಳುವೆರೆ ಪಕ್ಷ ಚಾವಡಿ ಕೂಟದ ಉಪಾಧ್ಯಕ್ಷ ನವೀನ್ ಪೂಜಾರಿ ಅಡ್ಕದಬೈಲು, ತುಳುವರೆ ಪಕ್ಷ ಕರಂಬಾರ್ ಗ್ರಾಮ ಸಮಿತಿ ಅಧ್ಯಕ್ಷ ಉಮೇಶ್ ಕುಲಾಲ್, ಮುಗಿದು ಗ್ರಾಮ ಸಮಿತಿದ ಅಧ್ಯಕ್ಷ ಉಮೇಶ್ ಕುಲಾಲ್, ಮುಗೇರ್ ಗ್ರಾಮ ಸಮಿತಿದ ಅಧ್ಯಕ್ಷ ಅಶ್ವಥ್ ಕುಲಾಲ್, ಬೊಲ್ತೇರ್ ಗ್ರಾಮ ಸಮಿತಿಯ ಉಪಾಧ್ಯಕ್ಷರಾದ ರಮೇಶ್ ಸಾಲಿಯಾನ್ ಮೊದಲಾದವರು ಉಪಸ್ಥಿತರಿದ್ದರು.