ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಜುಲೈ 23 : ಮುಕುಂದ ಕೃಪಾ ನರ್ಸರಿ, ಪ್ರಾಥಮಿಕ ಶಾಲೆಯ ಸಂಸ್ಥಾಪಕರ ದಿನಾಚರಣೆ ಹಾಗೂ ಗೋಲ್ಡನ್ ಜ್ಯುಬ್ಲಿ ಸಂಭ್ರಮಾಚಾರಣೆ

Posted On: 21-07-2022 11:27AM

ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದ ಬಳಿಯ ಮುಕುಂದ ಕೃಪಾ ಇಂಗ್ಲೀಷ್ ಮೀಡಿಯಂ ನರ್ಸರಿ ಹಾಗೂ ಪ್ರಾಥಮಿಕ ಶಾಲೆಯ ಸಂಸ್ಥಾಪಕರ ದಿನಾಚರಣೆ ಹಾಗೂ ಗೋಲ್ಡನ್ ಜ್ಯುಬ್ಲಿ ಸಂಭ್ರಮಾಚಾರಣೆಯ ಸಮಾರಂಭ ಜುಲೈ 23ರಂದು ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲಿ ಮಾಧ್ಯಾಹ್ನ 2:30 ಕ್ಕೆ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಕುದಿ ವಸಂತ ಶೆಟ್ಟಿ ಅವರು ಭಾಗವಹಿಸಲಿದ್ದಾರೆ. ಹಾಗೂ ಈ ವೇಳೆ ಸಮಾರಂಭದಲ್ಲಿ ಉಡುಪಿ ಶಾಸಕ ರಘುಪತಿ ಭಟ್,ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಉಡುಪಿ ಪ್ರಭಾರ ಬಿಇಒ ಅಶೋಕ್ ಕಾಮತ್, ಅಕಾಡೆಮಿ ಜನರಲ್ ಎಜುಕೇಷನ್ ಮಣಿಪಾಲ ಇದರ ಕಾರ್ಯದರ್ಶಿ ವರದಾಯ ಪೈ, ಡೆಂಟಾ ಕೇರ್ ಕ್ಲಿನಿಕ್ ಉಡುಪಿ ಇದರ ಡಾ.ವಿಜಯೇಂದ್ರ ವಸಂತ್ ರಾವ್, ಮುಕುಂದ ಕೃಪಾ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಪ್ರಭಾವತಿ.ಎಸ್ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.