ಹೊಂಡ ತಪ್ಪಿಸಲು ಹೋಗಿ ಹೊಂಡಕ್ಕೆ ಬಿದ್ದ ಕಾರು
Posted On:
22-07-2022 06:23PM
ಕಾಪು : ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66 ರ ಕಲ್ಲಾಪು ಸಮೀಪ ಉಡುಪಿಯಿಂದ ಪಡುಬಿದ್ರಿ ಕಡೆಗೆ ಹೋಗುತ್ತಿರುವಾಗ ಹೊಂಡ ತಪ್ಪಿಸಲು ಹೋಗಿ ಕಾರೊಂದು ಗದ್ದೆಗೆ ಉರುಳಿದ ಘಟನೆ ನಡೆದಿದೆ.
ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರು ಚಲಾಯಿಸುತ್ತಿದ್ದ ಪತ್ರಕರ್ತ ಹಮೀದ್ ಪಡುಬಿದ್ರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.