ಮಂಗಳೂರು : ಯುವವಾಹಿನಿಯ ಸದಸ್ಯರಾಗಿ, ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿಯಾಗಿ ಸಮಾಜದ ಅಭ್ಯುದಯಕ್ಕೆ ದುಡಿಯುತ್ತಿದ್ದ ಪ್ರವೀಣ್ ಪೂಜಾರಿ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಹತ್ಯೆಗೈದಿರುವುದು ವಿಷಾದನಿಯ ವಿಷಯ.
ಯುವವಾಹಿನಿಯು ಇದನ್ನು ತೀವ್ರವಾಗಿ ಖಂಡಿಸುತ್ತದೆ. ಸಮಾಜಕ್ಕಾಗಿ ಚಿಂತಿಸುತ್ತಿದ್ದ ಒಬ್ಬ ಪ್ರಾಮಾಣಿಕ ಸದಸ್ಯನನ್ನು ನಾವು ಕಳೆದು ಕೊಂಡಿದ್ದೇವೆ. ಪೊಲೀಸ್ ಇಲಾಖೆ ಹಂತಕರನ್ನು ಕೂಡಲೇ ಬಂಧಿಸಿ ಕಾನೂನುಕ್ರಮ ಜರಗಿಸುವಂತೆ ಸಂಘಟನೆಯು ಪೊಲೀಸ್ ಇಲಾಖೆಯನ್ನು ಈ ಹೇಳಿಕೆಯ ಮೂಲಕ ಆಗ್ರಹಿಸುತ್ತದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಉದಯ ಅಮೀನ್ ಮಟ್ಟು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.