ಕಾಪು : ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿ ಕಾರ್ಯಗಾರ, ಇ ಶ್ರಮ ಕಾರ್ಡ್ ವಿತರಣೆ
Posted On:
30-07-2022 06:55PM
ಕಾಪು : ಇಲ್ಲಿನ ಪುರಸಭಾ ಮತ್ತು ಕಾರ್ಮಿಕ ಇಲಾಖೆಯಿಂದ ಕಾಪುನಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿ ಶಿಬಿರವು ಕಾಪು ಪುರಸಭೆ ಮತ್ತು ಕಾರ್ಮಿಕ ಇಲಾಖೆಯ ಸಹಭಾಗಿತ್ವದಲ್ಲಿ ಶನಿವಾರ ಕಾಪು ಜೆಸಿ ಭವನದಲ್ಲಿ ಜರಗಿತು.
ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಗಾರ ಮತ್ತು ಇ ಶ್ರಮ ಕಾರ್ಡ್ ವಿತರಣಾ ಕಾರ್ಯಕ್ರಮವನ್ನು ಪುರಸಭಾ ಅಧಿಕಾರಿ ವೆಂಕಟೇಶ ನಾವಡರವರು ಸಸಿಗೆ ನೀರು ಎರೆಯುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭ ಅವರು ಮಾತನಾಡಿ, ಹಲವಾರು ಯೋಜನೆಗಳನ್ನು ಸರಕಾರ ತಂದಿದ್ದು, ಸಾರ್ವಜನಿಕರು ರಿಕ್ಷಾ ಚಾಲಕರು, ಬೀದಿ ಬದಿ ವ್ಯಾಪಾರಿಗಳು ಇದರ ಸದುಪಯೋಗ ಪಡೆಯುವಂತೆ ಮನವಿ ಮಾಡಿದರು. ಇದೇ ವೇಳೆ ಕಾಪುವಿನ ರಿಕ್ಷಾ ಚಾಲಕರು, ಬೀದಿಬದಿ ವ್ಯಾಪಾರಸ್ಥರು, ಹಾಗೂ ವಲಸಿ ಕಾರ್ಮಿಕರಿಗೆ ಮಾಹಿತಿ ನೀಡಲಾಯಿತು.
ವೇದಿಕೆಯಲ್ಲಿ ಕಾಪು ನಗರ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ, ಬೀದಿಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಉದಯಕುಮಾರ್, ಕಾರ್ಮಿಕ ಇಲಾಖೆ ಅಧಿಕಾರಿ, ರಿಕ್ಷಾ ಚಾಲಕರು, ಬೀದಿಬದಿ ವ್ಯಾಪಾರಸ್ಥರು, ವಲಸೆ ಕಾರ್ಮಿಕರು ಮತ್ತು ಪುರಸಭಾ ಸದಸ್ಯರು ಉಪಸ್ಥಿತರಿದ್ದರು.