ಕಾಪು ಶಾಸಕರಿಂದ 2 ಲಕ್ಷದ ಪರಿಹಾರ ಚೆಕ್ ಹಸ್ತಾಂತರ
Posted On:
30-07-2022 08:10PM
ಕಾಪು : ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಉಳಿಯಾರಗೋಳಿ ರಘು ಪೂಜಾರಿ ಮನೆಗೆ ಭೇಟಿ ನೀಡಿ 2 ಲಕ್ಷ ಮೊತ್ತದ ಪರಿಹಾರ ಚೆಕ್ ಹಸ್ತಾಂತರಿಸಿದರು.
ಕಳೆದ ದೀಪಾವಳಿ ಸಂದರ್ಭದಲ್ಲಿ ಕಾಪು ತಾಲೂಕು ಉಳಿಯಾರಗೋಳಿ ಗ್ರಾಮದ ರೋಹಿತ್ ರವರು ಮನೆಯ ಅಂಗಳದಲ್ಲಿಯೇ ಹಾವು ಕಡಿತದಿಂದಾಗಿ ಸಾವನ್ನಪ್ಪಿದ್ದರು. ಈ ಸಂದರ್ಭದಲ್ಲಿ ಮನೆಗೆ ತೆರಳಿ ಮಾನ್ಯ ಶಾಸಕರು ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ ಧೈರ್ಯ ತುಂಬಿದ್ದರು.
ಸರಕಾರದಿಂದ ಸುಮಾರು 2 ಲಕ್ಷ ರೂ.ಗಳನ್ನು ಮಂಜೂರಾತಿ ಮಾಡಿಸಿ ಇದರ ಮಂಜೂರಾತಿ ಪತ್ರವನ್ನು ಮೃತ ರೋಹಿತ್ ತಂದೆ ರಾಘು ಕೆ ಪೂಜಾರಿ ಯವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಕಾಪು ತಹಸೀಲ್ದಾರ್ ಶ್ರೀನಿವಾಸ್ ಮೂರ್ತಿ ಕುಲಕರ್ಣಿ, ಕಂದಾಯ ನೀರಿಕ್ಷಕರು ಸುಧೀರ್ ಕುಮಾರ್ ಶೆಟ್ಟಿ, ಹೊಸಮಾರಿಗುಡಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷರು ರಮೇಶ್ ಹೆಗ್ಡೆ, ಪುರಸಭೆ ಸದಸ್ಯರಾದ ಸುರೇಶ್ ದೇವಾಡಿಗ, ಲತಾ ದೇವಾಡಿಗ, ಪ್ರದೀಪ್ ಹಾಗೂ ಸ್ಥಳೀಯರಾದ ರಮೇಶ್ ಶೆಟ್ಟಿ, ಉಪಸ್ಥಿತರಿದ್ದರು.