ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು ಶಾಸಕರಿಂದ 2 ಲಕ್ಷದ ಪರಿಹಾರ ಚೆಕ್ ಹಸ್ತಾಂತರ

Posted On: 30-07-2022 08:10PM

ಕಾಪು : ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಉಳಿಯಾರಗೋಳಿ ರಘು ಪೂಜಾರಿ ಮನೆಗೆ ಭೇಟಿ ನೀಡಿ 2 ಲಕ್ಷ ಮೊತ್ತದ ಪರಿಹಾರ ಚೆಕ್ ಹಸ್ತಾಂತರಿಸಿದರು.

ಕಳೆದ ದೀಪಾವಳಿ ಸಂದರ್ಭದಲ್ಲಿ ಕಾಪು ತಾಲೂಕು ಉಳಿಯಾರಗೋಳಿ ಗ್ರಾಮದ ರೋಹಿತ್ ರವರು ಮನೆಯ ಅಂಗಳದಲ್ಲಿಯೇ ಹಾವು ಕಡಿತದಿಂದಾಗಿ ಸಾವನ್ನಪ್ಪಿದ್ದರು. ಈ ಸಂದರ್ಭದಲ್ಲಿ ಮನೆಗೆ ತೆರಳಿ ಮಾನ್ಯ ಶಾಸಕರು ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ ಧೈರ್ಯ ತುಂಬಿದ್ದರು.

ಸರಕಾರದಿಂದ ಸುಮಾರು 2 ಲಕ್ಷ ರೂ.ಗಳನ್ನು ಮಂಜೂರಾತಿ ಮಾಡಿಸಿ ಇದರ ಮಂಜೂರಾತಿ ಪತ್ರವನ್ನು ಮೃತ ರೋಹಿತ್ ತಂದೆ ರಾಘು ಕೆ ಪೂಜಾರಿ ಯವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಕಾಪು ತಹಸೀಲ್ದಾರ್ ಶ್ರೀನಿವಾಸ್ ಮೂರ್ತಿ ಕುಲಕರ್ಣಿ, ಕಂದಾಯ ನೀರಿಕ್ಷಕರು ಸುಧೀರ್ ಕುಮಾರ್ ಶೆಟ್ಟಿ, ಹೊಸಮಾರಿಗುಡಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷರು ರಮೇಶ್ ಹೆಗ್ಡೆ, ಪುರಸಭೆ ಸದಸ್ಯರಾದ ಸುರೇಶ್ ದೇವಾಡಿಗ, ಲತಾ ದೇವಾಡಿಗ, ಪ್ರದೀಪ್ ಹಾಗೂ ಸ್ಥಳೀಯರಾದ ರಮೇಶ್ ಶೆಟ್ಟಿ, ಉಪಸ್ಥಿತರಿದ್ದರು.