ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಆಗಸ್ಟ್ 31 : ಕಳತ್ತೂರು ಜ್ಯೋತಿನಗರ ಶ್ರೀ ಗಣೇಶೋತ್ಸವ ಸಮಿತಿಯ 32ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮ

Posted On: 31-07-2022 04:06PM

ಕಾಪು : ಕಳತ್ತೂರು ಶ್ರೀ ಗಣೇಶೋತ್ಸವ ಸಮಿತಿಯ 32ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮ ಆಗಸ್ಟ್ 31, ಬುಧವಾರದಂದು ಶ್ರೀ ಶೈಲಾ ಮಂಟಪ ಜ್ಯೋತಿನಗರದಲ್ಲಿ ಕೇಶವ ತಂತ್ರಿಯವರ ನೇತೃತ್ವದಲ್ಲಿ ನೆರವೇರಲಿದೆ.

ಆಗಸ್ಟ್ 28ರ ಬೆಳಿಗ್ಗೆ 9 ರಿಂದ ಊರಿನವರಿಗೆ ಹಾಗೂ ಸದಸ್ಯರಿಗೆ ವಿವಿಧ ಆಟೋಟ ಸ್ಪರ್ಧೆ, ಆಗಸ್ಟ್ 31ರಂದು ಪೂಜಾ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ ಜರಗಲಿದೆ.

ರಾತ್ರಿ ಮಂಗಲಮೂರ್ತಿಯ ಜಲದಿವಾಸ ನಡೆದು ಎಲ್ಲಾ ಕಾರ್ಯಕ್ರಮ ಅಂದು ಸಮಾಪ್ತಿಗೊಳ್ಳಲಿದೆ ಎಂದು ಸಮಿತಿಯ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.