ಆಗಸ್ಟ್ 31 : ಕಳತ್ತೂರು ಜ್ಯೋತಿನಗರ ಶ್ರೀ ಗಣೇಶೋತ್ಸವ ಸಮಿತಿಯ 32ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮ
Posted On:
31-07-2022 04:06PM
ಕಾಪು : ಕಳತ್ತೂರು ಶ್ರೀ ಗಣೇಶೋತ್ಸವ ಸಮಿತಿಯ 32ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮ ಆಗಸ್ಟ್ 31, ಬುಧವಾರದಂದು ಶ್ರೀ ಶೈಲಾ ಮಂಟಪ ಜ್ಯೋತಿನಗರದಲ್ಲಿ ಕೇಶವ ತಂತ್ರಿಯವರ ನೇತೃತ್ವದಲ್ಲಿ ನೆರವೇರಲಿದೆ.
ಆಗಸ್ಟ್ 28ರ ಬೆಳಿಗ್ಗೆ 9 ರಿಂದ ಊರಿನವರಿಗೆ ಹಾಗೂ ಸದಸ್ಯರಿಗೆ ವಿವಿಧ ಆಟೋಟ ಸ್ಪರ್ಧೆ, ಆಗಸ್ಟ್ 31ರಂದು ಪೂಜಾ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ ಜರಗಲಿದೆ.
ರಾತ್ರಿ ಮಂಗಲಮೂರ್ತಿಯ ಜಲದಿವಾಸ ನಡೆದು ಎಲ್ಲಾ ಕಾರ್ಯಕ್ರಮ ಅಂದು ಸಮಾಪ್ತಿಗೊಳ್ಳಲಿದೆ ಎಂದು ಸಮಿತಿಯ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.