ಕಾಪು : ಬಜರಂಗದಳ ಸಂಚಾಲಕನ ಮನೆಗೆ ಬಂದ ಅಪರಿಚಿತ ಯುವಕರು ; ಠಾಣೆಯಲ್ಲಿ ದೂರು ದಾಖಲು
Posted On:
31-07-2022 06:27PM
ಕಾಪು : ಇಲ್ಲಿನ ಬಜರಂದದಳದ ಸಂಚಾಲಕರಾದ ಸುಧೀರ್ ಸೋನುರವರ ಮನೆಗೆ ಇಬ್ಬರು ಅಪರಿಚಿತ ವ್ಯಕ್ತಿಗಳು ಬಂದು ನಿಮ್ಮ ಬಳಿ ಮಾತನಾಡಲಿದೆ ನಿಮ್ಮನ್ನು ಆಶಿಫ್ ಎನ್ನುವವರು ಕಾರಿನಲ್ಲಿ ಕಾಯುತ್ತಿದ್ದಾರೆ ಎಂದು ಹೇಳುತ್ತಿದ್ದಂತೆ ಅನುಮಾನಗೊಂಡ ಸುಧೀರ್ ಸೋನುರವರು ಕೂಡಲೇ ಬರುವುದಿಲ್ಲ ಎಂದು ನಿರಾಕರಿಸಿದ ಘಟನೆ ಇಂದು ನಡೆದಿದೆ.
ಇಬ್ಬರು ಅಪರಿಚಿತ ಯುವಕರ ಚಲನವಲನಗಳಿಂದ ಅನುಮಾನಗೊಂಡ ಸುಧೀರ್ ಸೋನು ಮತ್ತು ಅವರ ಪತ್ನಿ ಬರುವುದಿಲ್ಲ ಎಂದು ಹೇಳಿ ಕಳುಹಿಸಿದರು. ಅಪರಿಚಿತರು ಹೋಗುವಾಗ ಅವರ ಬಳಿ ಇದ್ದ ಆಯುಧಗಳನ್ನು ಗಮನಿಸಿದ ಸುಧೀರ್ ಸೋನುರವರು ಕೂಡಲೇ ಕಾಪು ಪೋಲಿಸ್ ಠಾಣೆಗೆ ಹೋಗಿ ದೂರು ನೀಡಿದ್ದಾರೆ.
ದೂರು ಸ್ವೀಕರಿಸಿದ ಪೋಲಿಸರು ಕಾರ್ಯಪ್ರವತ್ತರಾಗಿ ಆಶೀಫ್ ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.