ಕಾಪು : ಇಲ್ಲಿನ ಪಡು ಕುತ್ಯಾರು,ಶ್ರೀ ದುರ್ಗಾ ಮಂದಿರದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆಯು ಪಡುಕುತ್ಯಾರು ಶ್ರೀಮದ್ ಆನೆಗುಂದಿ ಸಂಸ್ಥಾನದ ಶಿಷ್ಯವೃಂದದವರ ಪೌರೋಹಿತ್ಯದಲ್ಲಿ ಇಂದು ಜರಗಿತು.
ಈ ಸಂದರ್ಭ ಶ್ರೀ ದುರ್ಗಾದೇವಿ ಮಹಿಳಾ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ಆಚಾರ್ಯ, ಕಾರ್ಯಧ್ಯಕ್ಷರಾದ ಜಯರಾಮ ಆಚಾರ್ಯ,
ಮಂಡಳಿಯ ಪದಾಧಿಕಾರಿಗಳು, ಸದಸ್ಯರು, ಭಕ್ತಾಧಿಮಾನಿಗಳು,ಭಾಗವಹಿಸಿ ಶ್ರೀ ವರ ಮಹಾಲಕ್ಷ್ಮಿಯ ಪ್ರಸಾದವನ್ನು ಸ್ವೀಕರಿಸಿದರು.