ಕಳತ್ತೂರು ಕುಲಾಲ ಒಕ್ಕೂಟ : ಸನ್ಮಾನ
Posted On:
07-08-2022 02:36PM
ಕಾಪು : ಕುಲಾಲ ಬಾಂಧವರು ಕಳತ್ತೂರು ಒಕ್ಕೂಟ ಇದರ ವತಿಯಿಂದ ರವಿವಾರ ತಿಂಗಳ ಮಾಸಿಕ ಸಭೆಯಲ್ಲಿ ಊರಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ವಿದ್ಯಾರ್ಥಿ ವೇತನ ಕಾರ್ಯಕ್ರಮ ನಡೆಯಿತು.
ಪ್ರತಿಭಾವಂತ ವಿದ್ಯಾರ್ಥಿಗಳಾದ ಶರಣ್ ಕುಲಾಲ್, ರವಿತೇಜ್ ಕುಲಾಲ್, ವೀಕ್ಷಾ ಕುಲಾಲ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸುಂದರ ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಸರ್ವ ಸದಸ್ಯರು ಉಪಸ್ಥಿತರಿದ್ದರು.
ಕಾಂಚನ ಕುಲಾಲ್ ಪ್ರಾರ್ಥಿಸಿ, ಸಂತೋಷ್ ಕುಲಾಲ್ ಮಲಂಗೋಲಿ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.