ಕಾಪು : ಉಡುಪಿ ಜಿಲ್ಲಾ ಜೆಡಿಎಸ್ ವಿಕಲಚೇತನ ಘಟಕದ ಅಧ್ಯಕ್ಷರಾದ ವಿಲ್ಫ್ರೆಡ್ ವಿ ಗೋಮ್ಸ್ ವಿಧಿವಶರಾಗಿದ್ದಾರೆ.
ವಿಲ್ಫ್ರೆಡ್ ವಿ ಗೋಮ್ಸ್ ಶಿರ್ವ ನಿವಾಸಿಯಾಗಿದ್ದು ಉಡುಪಿ ಜಿಲ್ಲೆಯ ವಿಕಲಚೇತನ ಸಂಘದ ಜಿಲ್ಲಾಧ್ಯಕ್ಷರಾಗಿ, ರಾಜ್ಯ ವಿಕಲಚೇತನ ಒಕ್ಕೂಟದ ಸದಸ್ಯರಾಗಿ, ಸಮಾಜ ಸೇವೆಯನ್ನು ಸಲ್ಲಿಸುತ್ತಿದ್ದರು. ಪಕ್ಷದಲ್ಲಿ ಸಕ್ರಿಯರಾಗಿದ್ದು,1997ರ ಅವಧಿಯಲ್ಲಿ ಅಂದಿನ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗ್ಗಡೆ ಅವರಿಂದ ಸಮಾಜ ಸೇವೆಗೆ ರಾಜ್ಯ ಮಟ್ಟದ ಪ್ರಶಸ್ತಿಯನ್ನೂ ಸ್ವೀಕರಿಸಿದ್ದರು.
ವಿಲ್ಫ್ರೆಡ್ ವಿ ಗೋಮ್ಸ್ ರವರ ನಿಧನಕ್ಕೆ ಉಡುಪಿ ಜಿಲ್ಲಾ ಜೆಡಿಎಸ್ ವತಿಯಿಂದ ಜಿಲ್ಲಾಧ್ಯಕ್ಷರಾದ ಯೋಗೀಶ್ ವಿ ಶೆಟ್ಟಿ ಯವರು ಸಂತಾಪ ವ್ಯಕ್ತಪಡಿಸಿದ್ದಾರೆ.