ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಟಪಾಡಿ : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಎಸ್ ವಿ ಎಸ್ ಪ್ರೌಢಶಾಲೆಯ ಮಕ್ಕಳಿಗೆ ಉಚಿತ ತ್ರಿವರ್ಣ ಧ್ವಜ ವಿತರಣೆ

Posted On: 12-08-2022 08:30PM

ಕಟಪಾಡಿ : ದೇಶವು ಸ್ವಾತಂತ್ರ್ಯದ 75 ಸಂವತ್ಸರಗಳನ್ನು ಪೂರೈಸಿದ ಶುಭ ಸಂದರ್ಭದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ "ಹರ್ ಘರ್ ತಿರಂಗಾ" (ಮನೆ ಮನೆಗಳಲ್ಲಿ ತ್ರಿವರ್ಣ ಧ್ವಜ) ಅಭಿಯಾನವು ಆಗಸ್ಟ್ 13ರಿಂದ ಆಗಸ್ಟ್ 15ರ ವರೆಗೆ ದೇಶಾದ್ಯಂತ ನಡೆಯಲಿದೆ. ಈ ಪ್ರಯುಕ್ತ ಕಟಪಾಡಿಯ ಎಸ್ ವಿ ಎಸ್ ಪ್ರೌಢಶಾಲಾ - ಕಾಲೇಜು ಹಳೆವಿದ್ಯಾರ್ಥಿಗಳ ವತಿಯಿಂದ ಎಸ್ ವಿ ಎಸ್ ಪ್ರೌಢಶಾಲೆಯ ಎಲ್ಲಾ ಮಕ್ಕಳಿಗೆ ಉಚಿತವಾಗಿ ತ್ರಿವರ್ಣ ಧ್ವಜವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸುಬ್ರಹ್ಮಣ್ಯ ತಂತ್ರಿ, ಪ್ರಾಧ್ಯಾಪಕರಾದ ವಿಜಯ, ವಿವೇಕಾನಂದ ಹಾಗೂ 1997-2002ರ ವರ್ಷದ ಎಸ್ ವಿ ಎಸ್ ಪ್ರೌಢಶಾಲಾ - ಕಾಲೇಜು ಹಳೆವಿದ್ಯಾರ್ಥಿಗಳು, ಗೌರವಾಧ್ಯಕ್ಷರು, ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.