ಕಟಪಾಡಿ : ದೇಶವು ಸ್ವಾತಂತ್ರ್ಯದ 75 ಸಂವತ್ಸರಗಳನ್ನು ಪೂರೈಸಿದ ಶುಭ ಸಂದರ್ಭದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ "ಹರ್ ಘರ್ ತಿರಂಗಾ" (ಮನೆ ಮನೆಗಳಲ್ಲಿ ತ್ರಿವರ್ಣ ಧ್ವಜ) ಅಭಿಯಾನವು ಆಗಸ್ಟ್ 13ರಿಂದ ಆಗಸ್ಟ್ 15ರ ವರೆಗೆ ದೇಶಾದ್ಯಂತ ನಡೆಯಲಿದೆ. ಈ ಪ್ರಯುಕ್ತ ಕಟಪಾಡಿಯ ಎಸ್ ವಿ ಎಸ್ ಪ್ರೌಢಶಾಲಾ - ಕಾಲೇಜು ಹಳೆವಿದ್ಯಾರ್ಥಿಗಳ ವತಿಯಿಂದ ಎಸ್ ವಿ ಎಸ್ ಪ್ರೌಢಶಾಲೆಯ ಎಲ್ಲಾ ಮಕ್ಕಳಿಗೆ ಉಚಿತವಾಗಿ ತ್ರಿವರ್ಣ ಧ್ವಜವನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸುಬ್ರಹ್ಮಣ್ಯ ತಂತ್ರಿ, ಪ್ರಾಧ್ಯಾಪಕರಾದ ವಿಜಯ, ವಿವೇಕಾನಂದ ಹಾಗೂ 1997-2002ರ ವರ್ಷದ ಎಸ್ ವಿ ಎಸ್ ಪ್ರೌಢಶಾಲಾ - ಕಾಲೇಜು ಹಳೆವಿದ್ಯಾರ್ಥಿಗಳು, ಗೌರವಾಧ್ಯಕ್ಷರು, ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.