ಹೇರೂರು : ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ; ಧಾರ್ಮಿಕ ಸಭಾ ಕಾರ್ಯಕ್ರಮ
Posted On:
14-08-2022 10:28AM
ಕಾಪು : ಶ್ರೀ ಗುರು ರಾಘವೇಂದ್ರ ಸಮಾಜ ಸೇವಾ ಮಂಡಳಿ ಮತ್ತು ಮಹಿಳಾ ಬಳಗ ಹೇರೂರು ಇವರ ಆಶ್ರಯದಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು.
ಭಜನಾ ಮಂಡಳಿಯ ಮುಂಭಾಗದ ಇಂಟರ್ಲಾಕ್ ಉದ್ಘಾಟನೆಯನ್ನು ಮಜೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶರ್ಮಿಳ ಆಚಾರ್ಯ ಉದ್ಘಾಟಿಸಿದರು.
ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಕಾಪು ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್, ಉಡುಪಿ ದಕ್ಷಿಣ ಕನ್ನಡ ಮೀನು ಮಾರಾಟಗಾರರ ಫೆಡರೇಷನ್ ಅಧ್ಯಕ್ಷರಾದ ಯಶ್ಪಾಲ್ ಸುವರ್ಣ, ಸನಾತನ ಸಂಸ್ಥೆ ಉಡುಪಿಯ ವಿಜಯಣ್ಣ ಅತಿಥಿಗಳಾಗಿ ಭಾಗವಹಿಸಿದರು.
ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪಬ್ಲಿಕ್ ಪರೀಕ್ಷೆಯಲ್ಲಿ 85 ಶೇಕಡಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಲಿಮ್ಕಾ ಬುಕ್ ಆಫ್ ರೆಕಾರ್ಡ್ ನಲ್ಲಿ ಹೆಸರು ದಾಖಲಿಸಿದ ಪ್ರಿಯಾಂಕ ಆಚಾರ್ಯ ಹೇರೂರು ಇವರನ್ನು ಅಭಿನಂದಿಸಲಾಯಿತು.
ಮಜೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮಧುಸೂಧನ ಸಾಲ್ಯಾನ್, ಭಜನಾ ಮಂಡಳಿಯ ಅಧ್ಯಕ್ಷರಾದ ಶ್ರೀನಿವಾಸ ದೇವಾಡಿಗ, ಮಹಿಳಾ ಬಳಗದ ಅಧ್ಯಕ್ಷರಾದ ಶಶಿಕಲಾ ದೇವಾಡಿಗ, ಮಜೂರು ಗ್ರಾಮ ಪಂಚಾಯತ್ ಸದಸ್ಯರಾದ ಮಂಜುಳಾ ಆಚಾರ್ಯ, ಮಜೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸಂದೀಪ್ ರಾವ್, ಗಣೇಶ್ ಶೆಟ್ಟಿ, ಸದಸ್ಯರಾದ ಪ್ರಸಾದ್ ಶೆಟ್ಟಿ ಒಳ ದೂರು, ವಿಜಯ ಧೀರಜ್, ಜಿತೇಶ್ ಶೆಟ್ಟಿ, ಮಜೂರು ಗ್ರಾಮ ಪಂಚಾಯತ್ ಪಿಡಿಒ ವಿಲಾಸಿನಿ ಉಪಸ್ಥಿತರಿದ್ದರು. ಶ್ರೀ ಗುರು ರಾಘವೇಂದ್ರ ಮಹಿಳಾ ಬಳಗದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಸುನಿತಾ ಸೇರಿ ಗಾರ್ ಮತ್ತು ಕುಮಾರಿ ಸುರಭಿ ಪ್ರಾರ್ಥಿಸಿದರು. ದಿನೇಶ್ ದೇವಾಡಿಗ ಪ್ರಾಸ್ತಾವಿಕ ಮಾತಿನೊಂದಿಗೆ ಸ್ವಾಗತಿಸಿದರು. ಉದಯ ದೇವಾಡಿಗ ಮತ್ತು ಸುಜಿತ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಶ್ರೀನಿವಾಸ ಪ್ರಭು ವಂದಿಸಿದರು.