ಕಟಪಾಡಿ : 75 ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸವಿನೆನಪಿಗಾಗಿ ಏಣಗುಡ್ಡೆ ಅಗ್ರಹಾರದ ಗ್ರಾಮದ ಮಕ್ಕಳಿಗೆ ಅನುಕೂಲವಾಗುವಂತೆ ಊರ ದಾನಿಗಳ ಸಹಾಯದಿಂದ ನಿರ್ಮಾಣಗೊಂಡಿದ್ದ ಮಕ್ಕಳ ಬಾಲವನದ ನವೀಕರಣದ ಉದ್ಘಾಟನೆಯು ಆಗಸ್ಟ್ 15 ರಂದು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅಗ್ರಹಾರ ದ ಬಳಿಯಲ್ಲಿ ನಡೆಯಿತು.
ಈ ಸಂಧರ್ಭದಲ್ಲಿ ಹಿಂದೂ ಯುವಸೇನೆ ಶ್ರೀ ದುರ್ಗಾಪರಮೇಶ್ವರಿ ಘಟಕ ಅಗ್ರಹಾರ ಇದರ ಅಧ್ಯಕ್ಷರಾದ ದಿಲೀಪ್ ಕುಮಾರ್, ಕಾರ್ಯದರ್ಶಿ ಮಂಜುನಾಥ್, ಕೋಶಾಧಿಕಾರಿ ಅರ್ಜುನ್, ತಾಲೂಕು ಪಂಚಾಯತ್ ಸದಸ್ಯರಾದ ನಾಗೇಶ್ ಹಾಗೂ ಕಾರ್ಯಕರ್ತರಾದ ದೀಪಕ್ ದುರ್ಗಾನಗರ, ಸಂತೋಷ್.ಎನ್.ಎಸ್, ಕಟಪಾಡಿ ಗಣೇಶ್ ಉಪಸ್ಥಿತರಿದ್ದರು.