ಉಡುಪಿ : ಕೇಂದ್ರ ಸರ್ಕಾರದ ಭೂವಿಜ್ಞಾನ ಸಚಿವಾಲಯ, ಸಮುದ್ರ ಜೀವ ಸಂಪನ್ಮೂಲ ಮತ್ತು ಪರಿಸರ ವಿಜ್ಞಾನ ಕೇಂದ್ರ ಹಾಗೂ ಎ.ಟಿ.ಎ.ಎಲ್ ಭವನ್ ಕೊಚ್ಚಿ ಇವರ ಸಹಯೋಗದಲ್ಲಿ ಸ್ವಚ್ಛ್ ಸಾಗರ್ ಸುರಕ್ಷಿತ್ ಸಾಗರ್ ಕಾರ್ಯಕ್ರಮದಡಿ ಸಮುದ್ರ ಮಾಲಿನ್ಯ ಮತ್ತು ಕಡಲ ತೀರದ ಸ್ವಚ್ಛತೆಯ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವು ಆಗಸ್ಟ್ 18 ರಂದು ಬೆಳಗ್ಗೆ 9 ಗಂಟೆಗೆ ಉಡುಪಿಯ ಮಲ್ಪೆಯಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಉದ್ಘಾಟಿಸಲಿದ್ದು, ನಗರಸಭೆಯ ಪೌರಾಯುಕ್ತ ಡಾ. ಉದಯ್ ಕುಮಾರ್ ಶೆಟ್ಟಿ, ಉಡುಪಿ ಎಂ.ಜಿ.ಎಮ್ ಕಾಲೇಜಿನ ಪ್ರಾಂಶುಪಾಲ ಪ್ರೊ. ಲಕ್ಷ್ಮೀನಾರಾಯಣ ಕಾರಂತ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.