ಕಾಪು : ಬ್ಯಾಂಕ್ ಗೆ ಹೋದ ವ್ಯಕ್ತಿ ನಾಪತ್ತೆ
Posted On:
27-08-2022 04:51PM
ಕಾಪು : ಇಲ್ಲಿನ ಬ್ಯಾಂಕ್ ಆಫ್ ಬರೋಡದ ಜುವೆಲ್ ಚೆಕ್ ಗಾಗಿ ಹೋಗುವುದಾಗಿ ತಿಳಿಸಿದ ವ್ಯಕ್ತಿಯೋರ್ವರು ಮನೆಗೆ ಬಾರದೆ ಇದ್ದ ಘಟನೆ ಆಗಸ್ಟ್ 25 ರಂದು ನಡೆದಿದೆ.
ಹರಿಪ್ರಸಾದ್ ಎಂಬುವವರು ಇವರ ಮನೆಯಾದ ಶಂಕರ ನಿಲಯ ಶಿರಿಬೀಡು ಉಡುಪಿಯಿಂದ ಆಗಸ್ಟ್ 25 ರ ಬೆಳಿಗ್ಗೆ 08.45 ಗಂಟೆಗೆ ಕೆಲಸಕ್ಕೆಂದು ತೆರಳಿದ್ದು, ಮಧ್ಯಾಹ್ನ ಕಾಪುವಿನ ಬ್ಯಾಂಕ್ ಆಫ್ ಬರೋಡದ ಜುವೆಲ್ ಚೆಕ್ ಗಾಗಿ ಹೋಗುವುದಾಗಿ ಪತ್ನಿಯಲ್ಲಿ ತಿಳಿಸಿರುತ್ತಾರೆ. ನಂತರ ಇವರು ಸಂಜೆ 04 ಗಂಟೆಗೆ ಕರೆ ಮಾಡಿ ಬೇಗ ಮನೆಗೆ ಬರುವಂತೆ ತಿಳಿಸಿದ್ದಲ್ಲಿ ತಡವಾಗುವುದಾಗಿ ತಿಳಿಸಿರುತ್ತಾರೆ. ಬಳಿಕ ಪತ್ನಿಯ ಅತ್ತೆ ಕರೆ ಮಾಡಿ ಮನೆಗೆ ಬೇಗ ಬರುವಂತೆ ತಿಳಿಸಿರುತ್ತಾರೆ. ನಂತರ ಸಂಜೆ 7 ಗಂಟೆಗೆ ಕರೆ ಮಾಡಿದಾಗ ಮೊಬೈಲ್ ಸ್ವಿಚ್ ಆಫ್ ಎಂದು ಬರುತ್ತಿರುವುದನ್ನು ಮನಗಂಡು ಶಿರ್ವ ಬ್ರಾಂಚ್ ಮ್ಯಾನೇಜರ್ ಗೆ ವಿಚಾರಿಸಿದಲ್ಲಿ ಹರಿಪ್ರಸಾದ್ ಸಂಜೆ 6 ಗಂಟೆಗೆ ಕಾಪುವಿನಿಂದ ಮನೆಗೆ ಹೋಗುತ್ತೇನೆ ಎಂದು ಹೇಳಿ ಹೋಗಿರುತ್ತಾರೆ ಎಂದು ತಿಳಿಸಿರುತ್ತಾರೆ.
ಈ ಬಗ್ಗೆ ಪರಿಚಯದವರಲ್ಲಿ, ಸಂಬಂಧಿಕರಲ್ಲಿ ವಿಚಾರಿಸಿದಾಗ ಅಲ್ಲಿಗೂ ಹೋಗದೇ ಮನೆಗೂ ಬಾರದೇ ಕಾಣೆಯಾಗಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.