ಪಡುಬಿದ್ರಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಶುಕ್ರವಾರ ಮಂಗಳೂರಿಗೆ ಭೇಟಿ ಹಿನ್ನೆಲೆಯಲ್ಲಿ ಪಡುಬಿದ್ರಿ ಜಂಕ್ಷನ್ ಬಳಿ ಎಲ್ಲಾ ಸಾರ್ವಜನಿಕ ವಾಹನಗಳನ್ನು, ಘನ ವಾಹನಗಳನ್ನು ಕಾರ್ಕಳ ರಸ್ತೆಯ ಮೂಲಕ ಸಾಗಲು ತಿಳಿಸಲಾಗುತ್ತಿದೆ.
ಈ ಬಗ್ಗೆ ಪಡುಬಿದ್ರಿ ಪೊಲೀಸರು ಸಾರ್ವಜನಿಕರಿಗೆ ತಿಳಿಯಲು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪಡುಬಿದ್ರೆ ಜಂಕ್ಷನ್ ಮುಖಾಂತರ ಬೆಂಗಳೂರು ಮತ್ತು ಕೇರಳಕ್ಕೆ ಸಂಚರಿಸುವ ವಾಹನಗಳು ಬೆಳ್ಳಣ್ಣು - ಕಾರ್ಕಳ -ಬೆಳುವಾಯಿ- ಮೂಡಬಿದ್ರೆ– ಬಿ.ಸಿ.ರೋಡ್ ಮುಖೇನ ಸಂಚರಿಸಬೇಕೆಂದು ಪಡುಬಿದ್ರಿ ಜಂಕ್ಷನ್ ಬಳಿ ಬ್ಯಾನರ್ ಅಳವಡಿಸಿದ್ದಾರೆ.
ಹಲವಾರು ಚಾಲಕರು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸುವುದು ಕಂಡು ಬಂದಿದೆ.
ಕಾರ್ಕಳ ರಸ್ತೆಯ ಇಕ್ಕೆಲಗಳಲ್ಲಿ ಘನವಾಹನಗಳು ಜಾಮ್ ಆಗಿದ್ದು, ವಾಹನ ಚಾಲಕರು ಬದಲಿ ಮಾರ್ಗವಾಗಿ ಸಂಚರಿಸುವುದು ವಿಳಂಬವಾಗುವುದರಿಂದ
ಸಂಜೆ 6 ಗಂಟೆಯವರೆಗೆ ಕಾದು ನಂತರ ಮುಂದುವರಿಯುವ ನಿರೀಕ್ಷೆಯಲ್ಲಿದ್ದಾರೆ.
ಪಡುಬಿದ್ರಿ ಪಿಎಸ್ಐ ಪ್ರಕಾಶ್, ಸಾಲಿಯಾನ್ ದಿವಾಕರ್, ಹರೀಶ್, ರಾಜೇಶ್, ಹೈವೇ ಪಟ್ರೋಲ್ ಮತ್ತು ಗೃಹರಕ್ಷಕ ಸಿಬ್ಬಂದಿ ಹೆದ್ದಾರಿಯಲ್ಲಿ ಬಂದೋಬಸ್ತ್ ಮಾಡುತ್ತಿದ್ದಾರೆ.