ಉಚ್ಚಿಲ : ಕಾಪು ತಾಲೂಕಿನ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಬಡಾ ಉಚ್ಚಿಲದ ತಡೆಗೋಡೆ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 2,50,000 ರೂಪಾಯಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕಿನ ಯೋಜನಾಧಿಕಾರಿಯಾದ ಜಯಂತಿ ದೇವಸ್ಥಾನದ ಆಡಳಿತ ಮಂಡಳಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷರಾದ ಚಂದ್ರಶೇಖರ ಶೆಟ್ಟಿ, ಆಡಳಿತ ಮಂಡಳಿಯ ಸದಸ್ಯರು, ಅರ್ಚಕ ವೃಂದ, ವಲಯ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.