ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಶಿರ್ವ ರೋಟರಿ ಕ್ಲಬ್ : ಶಿಕ್ಷಕರ ದಿನಾಚರಣೆ, ನಿವೃತ್ತ ಶಿಕ್ಷಕರ ಸನ್ಮಾನ, ಪ್ರತಿಭಾ ಪುರಸ್ಕಾರ

Posted On: 04-09-2022 10:11PM

ಶಿರ್ವ : ಇಲ್ಲಿನ ರೋಟರಿ ಕ್ಲಬ್ ವತಿಯಿಂದ ಬಂಟಕಲ್ಲು ರೋಟರಿ ಸಭಾಭವನದಲ್ಲಿ ಭಾನುವಾರ ಸಂಜೆ ಶಿಕ್ಷಕರ ದಿನಾಚರಣೆ, ನಿವೃತ್ತ ಶಿಕ್ಷಕರ ಸನ್ಮಾನ, ಪ್ರತಿಭಾ ಪುರಸ್ಕಾರ ಸಮಾರಂಭ ನೆರವೇರಿತು. ಕಾರ್ಯಕ್ರಮವನ್ನು ಶಿರ್ವ ಸಂತಮೇರಿ ಕಾಲೇಜಿನ ಪ್ರಾಚಾರ್ಯ ಡಾ. ಹೆರಾಲ್ಡ್ ಐವನ್ ಮೋನಿಸ್ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಶಿಕ್ಷಕ ವೃತ್ತಿ ಅತ್ಯಂತ ಪವಿತ್ರ ವೃತ್ತಿಯಾಗಿದ್ದು, ನಿಸ್ವಾರ್ಥ ಸೇವೆಗೆ ಉತ್ತಮ ಅವಕಾಶವನ್ನು ನೀಡುತ್ತದೆ. ವಿದ್ಯಾರ್ಥಿಗಳನ್ನು ಸಮಾಜದ ನಿರ್ಮಾತೃರನ್ನಾಗಿ ರೂಪಿಸುವವರು ಶಿಕ್ಷಕರು. ಶಿಕ್ಷಕರ ಕರ್ತವ್ಯಪ್ರಜ್ಞೆ, ಬದ್ಧತೆ ವೃತ್ತಿಯ ಘನತೆ ಮತ್ತು ಗೌರವವನ್ನು ಹೆಚ್ಚಿಸುತ್ತದೆ ಎಂದರು.

ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರುಗಳಾದ ಸಂತಮೇರಿ ಪದವಿ ಪೂರ್ವ ಕಾಲೇಜಿನ ಗಿಲ್ಬರ್ಟ್ ಪಿಂಟೊ, ಕ್ಲಾರಾ ಕುಟಿನ್ಹಾ, ಪ್ರೆಸಿಲ್ಲಾ ಮಚಾದೋ, ಬಂಟಕಲ್ಲು ಶ್ರೀದುರ್ಗಾಪರಮೇಶ್ವರೀ ಶಾಲಾ ನಿವೃತ್ತ ಮುಖ್ಯ ಶಿಕ್ಷಕಿ ಲಾವಣ್ಯವತಿಯವರನ್ನು ಸನ್ಮಾನಿಸಲಾಯಿತು. ಉಪಸ್ಥಿತರಿದ್ದ ಸರ್ವ ಶಿಕ್ಷಕ ಶಿಕ್ಷಕಿಯರನ್ನು ಸ್ಮರಣಿಕೆ ನೀಡಿ ಗುರುವಂದನೆ ಸಲ್ಲಿಸಲಾಯಿತು. ಶಿರ್ವ ಸಂತಮೇರಿ ಕಾಲೇಜಿನ ಬಿ.ಕಾಂ ರ‍್ಯಾಂಕ್ ವಿಜೇತೆ ವಿದ್ಯಾರ್ಥಿನಿ ಕುಮಾರಿ ರಕ್ಷಾ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ಪ್ರತಿಭಾನ್ವಿತೆಯರಾದ ದೀಪಾಲಿ ಪಿ.ಕೊಟ್ಯಾನ್, ರವಿತೇಜ ಆರ್ ಕುಲಾಲ್, ಯತಿನ್ ಮೂಲ್ಯ, ಕುಮಾರಿ ಐಶ್ವರ್ಯ ಆಂಗ್ಲ ಮಾಧ್ಯಮ ಪಡುಬೆಳ್ಳೆ ಇವರನ್ನು ರೋಟರಿ ವಲಯ ಸಹಾಯಕ ಗವರ್ನರ್ ಡಾ. ಶಶಿಕಾಂತ ಕರೀಂಕರವರು ಅಭಿನಂದಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಶಿರ್ವ ಎಸ್‌ಬಿಐ ಶಾಖಾ ಹಿರಿಯ ಪ್ರಬಂಧಕ ನಿತ್ಯಾನಂದಮೂರ್ತಿ ಕೆ.ಎನ್‌ರವರನ್ನು ನೂತನ ಸದಸ್ಯರನ್ನಾಗಿ ಸ್ವಾಗತಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ರೋಟರಿ ಅಧ್ಯಕ್ಷ ಡಾ.ವಿಟ್ಠಲ್ ನಾಯಕ್ ವಹಿಸಿದ್ದರು.

ವೃತ್ತಿಸೇವಾ ನಿರ್ದೇಶಕ ಲೂಕಾಸ್ ಡಿಸೋಜ ಸ್ವಾಗತಿಸಿದರು.ಜಗದೀಶ ಶೆಟ್ಟಿ, ಮೆಲ್ವಿನ್ ಡಿಸೋಜ, ಅಶ್ವಿನಿ ಅರಾನ್ಹಾ, ವಿಲಿಯಮ್ ಮಚಾದೋ, ಮೈಕಲ್ ಮತಾಯಸ್ ಪರಿಚಯಿಸಿದರು. ಹಿಲ್ಡಾ ಮತಾಯಸ್ ನಿರೂಪಿಸಿದರು. ಸಾರ್ಜಂಟ್ ರೊನಾಲ್ಡ್ ಡಿಸೋಜ ಸಹಕರಿಸಿದರು. ಸಹ ಕಾರ್ಯದರ್ಶಿ ಅಮಿತ್ ಅರಾನ್ಹಾ ವಂದಿಸಿದರು.