ಕಟಪಾಡಿ : ಹಿಂದೂ ಯುವ ಸೇನೆ ಶ್ರೀ ದುರ್ಗಾಪರಮೇಶ್ವರಿ ಘಟಕ ಅಗ್ರಹಾರ ಕಟಪಾಡಿ ಇವರ ವತಿಯಿಂದ 16 ನೇ ಸಾರ್ವಜನಿಕ ಶನಿಕಥಾ ಪಾರಾಯಣ ಸೆಪ್ಟೆಂಬರ್ 4 ರಂದು ಅಗ್ರಹಾರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ಊರ ಗ್ರಾಮಸ್ಥರ ಸಮ್ಮುಖದಲ್ಲಿ ನಡೆಯಿತು.
ಬೆಳ್ಳಿಗ್ಗೆ ಕಲಶ ಪ್ರತಿಷ್ಠೆಯಾಗಿ ಶನಿಕಥಾ ಪಾರಾಯಣ ಆರಂಭಗೊಂಡು ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ಜರಗಿತು. ಸಂಜೆ ಮಹಾಪೂಜೆ ನಡೆದು ಪ್ರಸಾದ ವಿತರಣೆ ಜರಗಿತು.
ಈ ಸಂಧರ್ಭದಲ್ಲಿ ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್, ಸುರೇಶ್ ಶೆಟ್ಟಿ ಗುರ್ಮೆ, ಶಿಲ್ಪಾ ಜಿ ಸುವರ್ಣ, ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾಪು ತಾಲೂಕ್ ಬಿ.ಜೆ.ಪಿ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ಜಿಲ್ಲಾ ಉಪಾಧ್ಯಾಕ್ಷರಾದ ಶ್ರೀಶ ನಾಯಕ್ ಹಾಗೂ ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ಊರ ಗ್ರಾಮಸ್ಯರು ಉಪಸ್ಥಿತರಿದ್ದರು.