ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಪಡುಬಿದ್ರಿ : 1 ಕೋಟಿ 10 ಲಕ್ಷ ರೂ.ಗಳ ಕಾಮಗಾರಿ ; 3 ರಸ್ತೆಗಳ ಲೋಕಾರ್ಪಣೆ

Posted On: 11-09-2022 03:09PM

ಪಡುಬಿದ್ರಿ : ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಪಡುಬಿದ್ರೆ ಪಂಚಾಯತ್ ವ್ಯಾಪ್ತಿಯ 5 ನೇ ವಾರ್ಡಿನ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಿ ಸುಮಾರು 1 ಕೋಟಿ 10 ಲಕ್ಷ ರೂಪಾಯಿಗಳ ಅಭಿವೃದ್ಧಿಗೊಂಡ 3 ರಸ್ತೆಗಳನ್ನು ಲೋಕಾರ್ಪಣೆಗೊಳಿಸಿದರು.

ಸ್ಥಳೀಯರ ರಸ್ತೆ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು 1 ಕೋಟಿ ಅನುದಾನದಿಂದ, ಅಪ್ಪು ಪೂಜಾರಿ ಮನೆ ಸಮೀಪ ರಸ್ತೆ ಅಭಿವೃದ್ಧಿ 5 ಲಕ್ಷ, ರಘುಪತಿ ಭಟ್ ಮನೆ ಬಳಿ ರಸ್ತೆ ಅಭಿವೃದ್ಧಿಗೆ 5 ಲಕ್ಷ ಅನುದಾನದಿಂದ ರಸ್ತೆ ಅಭಿವೃದ್ಧಿಗೊಂಡು ಭರವಸೆಯಂತೆ ಸಾರ್ವಜನಿಕರ ಉಪಯೋಗಕ್ಕೆ ಬಿಟ್ಟುಕೊಡಲಾಗಿದೆ.

ಪಂಚಾಯತ್ ವ್ಯಾಪ್ತಿಯ  ಉಳಿದ ವಾರ್ಡ್ಗಳಲ್ಲಿ ಕೋಟಿ ರೂಗಳ ಅನುದಾನ ಮಂಜೂರುಗೊಂಡಿದ್ದು ಶೀಘ್ರದಲ್ಲಿ ಕಾಮಗಾರಿ ಪ್ರಾರಂಭಿಸಲು ಗುದ್ದಲಿ ಪೂಜೆ ನೆರವೇರಿಸಲಾಗುವುದು ಹಾಗೂ ಬಿಜೆಪಿ ಆಡಳಿತವಿರುವ ಗ್ರಾಮ ಪಂಚಾಯತ್ ಈ ಭಾಗದ ಜನರ ಸಮಸ್ಯೆಗಳಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಿತ್ತಿದ್ದು ಮೂಲ ಸೌಕರ್ಯ ಅಭಿವೃದ್ಧಿಗೆ ವಿಶೇಷ ಒತ್ತು ನೀಡುತ್ತಿದ್ದು. ಹಾಗೂ ಇನ್ನಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದರು.

ಈ ಸಂದರ್ಭದಲ್ಲಿ ಪಡುಬಿದ್ರಿ ಪಂಚಾಯತ್ ಅಧ್ಯಕ್ಷ ರವಿ ಶೆಟ್ಟಿ, ಉಪಾಧ್ಯಕ್ಷೆ ಯಶೋದ, ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರುಗಳಾದ ಮಹೇಂದ್ರ ಪೂಜಾರಿ, ವಿನಾಯಕ್ ಪುತ್ರನ್ , ಅಶೋಕ್ ಪೂಜಾರಿ ಹಾಗೂ ಸ್ಥಳೀಯರು, ಕಾರ್ಯಕರ್ತರು, ಮತ್ತಿತರರು ಉಪಸ್ಥಿತರಿದ್ದರು.