ಕಾಪು : ಇಲ್ಲಿನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜೆಡಿಎಸ್ ಪಕ್ಷದ ಸಾಮಾನ್ಯ ಸಭೆ ಮತ್ತು ಪಕ್ಷ ಸೇರ್ಪಡೆ ಕಾರ್ಯಕ್ರಮವು ಬುಧವಾರ ಬೆಳಿಗ್ಗೆ ಉಡುಪಿ ಜಿಲ್ಲಾಧ್ಯಕ್ಷರಾದ ಯೋಗೇಶ್ ವಿ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಕಾಪು ಮಹಾಬಲ ಮಾಲ್ ನ ಪಕ್ಷ ಕಚೇರಿಯಲ್ಲಿ ಜರಗಿತು.
ಸಭೆಯಲ್ಲಿ ಬೂತ್ ಮಟ್ಟದ ಸಭೆ ನಡೆಸುವ ಬಗ್ಗೆ ಚರ್ಚಿಸಲಾಯಿತು. ಕಾಪು ವಿಧಾನಸಭಾ ಕ್ಷೇತ್ರದ ಉತ್ತರ ವಲಯದ ಅಧ್ಯಕ್ಷರಾದ ಇಕ್ಬಾಲ್ ಅತ್ರಾಡಿ ಮತ್ತು ದಕ್ಷಿಣ ವಲಯದ ಭರತ್ ಕುಮಾರ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯರಾಮ ಆಚಾರ್ಯ, ಪುರಸಭೆ ಸದಸ್ಯರಾದ ಉಮೇಶ್ ಕರ್ಕೇರ, ಸಂಕಪ್ಪ ಎ, ಸಂಜಯಕುಮಾರ್, ಕಾರ್ಕಳ ಬ್ಲಾಕ್ ಅಧ್ಯಕ್ಷರಾದ ಶ್ರೀಕಾಂತ್ ಹೆಬ್ರಿ, ಮನ್ಸೂರ್ ಇಬ್ರಾಹಿಂ,ಹುಸೇನ್ ಹೈಕಾಡಿ ಮತ್ತಿರರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂಧರ್ಭ ಶ್ರೀ ಫೈಝಮ್ ಮತ್ತು ಅವಿನಾಶ್ ರವರೂ ಸೇರಿ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಸಮಾಜದ ಹಲವಾರು ಯುವಕರು ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಸಂದರ್ಭ ಜಿಲ್ಲಾಧ್ಯಕ್ಷರಾದ ಯೋಗೇಶ್ ವಿ ಶೆಟ್ಟಿಯವರು ಯುವಕರಿಗೆ ಶಾಲು ಹೊದಿಸಿ, ಪಕ್ಷದ ಧ್ವಜವನ್ನು ನೀಡಿ ಪಕ್ಷಕ್ಕೆ ಬರಮಾಡಿಕೊಂಡರು ಮತ್ತು ಪಕ್ಷ ಸಂಘಟನೆಗೆ ಒತ್ತು ನೀಡುವರೆ ಕರೆ ನೀಡಿದರು.
ಸಭೆಯಲ್ಲಿ ನಾಯಕರುಗಳಾದ ಸುಧಾಕರ್ ಶೆಟ್ಟಿ, ಇಸ್ಮಾಯಿಲ್ ಪಲಿಮಾರ್, ಚಂದ್ರಹಾಸ ಎರ್ಮಾಳ್,ವೆಂಕಟೇಶ್ ಎಂ ಟಿ, ಅಬ್ದುಲ್ ರಜಾಕ್ ಉಚ್ಚಿಲ, ರಂಗಾ ಕೋಟ್ಯಾನ್, ದೇವರಾಜ್ ಕಾಪು,ಸುರೇಶ ದೇವಾಡಿಗ, ಇಬ್ರಾಹಿಂ ತವಕ್ಕಲ್, ಮಹಮ್ಮದ್ ರಫೀಕ್, ಶಂಶುದ್ದಿನ್, ಬಿ ಕೆ ಮಹಮ್ಮದ್, ಅಬ್ಬಾಸ್ ಹಾಜೀ, ಪ್ರಶಾಂತ್ ಭಂಡಾರಿ,ಸಾರ್ಫಾಜ್ ಮಲ್ಲಾರ್,ರವಿಚಂದ್ರ ಶೆಟ್ಟಿ, ಯು ಎ ರಶೀದ್, ಮತ್ತು ಪಕ್ಷ ಕಾರ್ಯಕರ್ತರು ಹಾಜರಿದ್ದರು.