ಕಾಪು : ಇಲ್ಲಿನ ಪೊಲೀಸ್ ಠಾಣೆಯಲ್ಲಿ ಮುಂಬರುವ ಸೆಪ್ಟೆಂಬರ್ 21 ರಂದು ಉಳಿಯಾರಗೋಳಿ ಗ್ರಾಮದ ಕೈಪುಂಜಾಲು ವಹಿಯುಲ್ಲಾ ದರ್ಗಾದ (ಕಾಪು ಪೋಲಿಪು ಜಾಮಿಯಾ ಮಸೀದಿಯ ಅಧೀನದಲ್ಲಿರುವ) ಉರುಸ್ ಕಾರ್ಯಕ್ರಮದ ಪ್ರಯುಕ್ತ ಶಾಂತಿ ಸಭೆಯನ್ನು ಪೊಲೀಸ್ ವೃತ್ತ ನಿರೀಕ್ಷಕರು ಕಾಪು ಇವರ ನೇತೃತ್ವದಲ್ಲಿ ನಡೆಸಲಾಯಿತು.
ಈ ವೇಳೆ ಪೋಲಿಪು ಜಾಮಿಯಾ ಮಸೀದಿ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ಕೈ ಪುಂಜಾಲು ವಾರ್ಡ್ನ ಪುರಸಭಾ ಸದಸ್ಯರು ಹಾಗೂ ಕೈಪುಂಜಾಲಿನ ಸ್ಥಳೀಯರು ಉಪಸ್ಥಿತಿಯಿದ್ದರು.